AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನಾರ್ಧನ ರೆಡ್ಡಿಯನ್ನು 2008ರಿಂದ ಎದುರಿಸುತ್ತಿದ್ದೇವೆ, ಅವರಿಂದ ಆತಂಕವಿಲ್ಲ: ಅನ್ನಪೂರ್ಣ

ಜನಾರ್ಧನ ರೆಡ್ಡಿಯನ್ನು 2008ರಿಂದ ಎದುರಿಸುತ್ತಿದ್ದೇವೆ, ಅವರಿಂದ ಆತಂಕವಿಲ್ಲ: ಅನ್ನಪೂರ್ಣ

ಅರುಣ್​ ಕುಮಾರ್​ ಬೆಳ್ಳಿ
|

Updated on:Oct 24, 2024 | 2:18 PM

Share

ತಮ್ಮ ಪರ ಪ್ರಚಾರ ಮಾಡಲು ಸಿಎಂ, ಡಿಸಿಎಂ ಮತ್ತು ಇನ್ನೂ ಹಲವಾರು ಪ್ರಮುಖ ನಾಯಕರು ಬರಲಿದ್ದಾರೆಂದ ಅನ್ನಪೂರ್ಣ, ಸಿದ್ದರಾಮಯ್ಯ ಸರ್ಕಾರ ಘೋಷಿಸಿ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡು ಜನರ ಮತ ಕೇಳುವುದಾಗಿ ಹೇಳಿದರು.

ಬಳ್ಳಾರಿ: ಸಂಡೂರು ವಿಧಾನಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಸಂಸದ ಇ ತುಕಾರಾಂ ಅವರ ಪತ್ನಿ ಅನ್ನಪೂರ್ಣ ತುಕಾರಾಂ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡುವಾಗ ತಮ್ಮ ಪಕ್ಷದ ಎಲ್ಲ ಹಿರಿಯ ನಾಯಕರಿಗೆ ಮತ್ತು ಕಾರ್ಯಕರ್ತರಿಗೆ ಧನ್ಯವಾದಗಳನ್ನು ಸಲ್ಲಿಸಿದ್ದರು. ಬಿಜೆಪಿ ಶಾಸಕ ಗಾಲಿ ಜನಾರ್ಧನರೆಡ್ಡಿಯವರು ಸಂಡೂರಲ್ಲಿ ಮನೆ ಮಾಡಿ ಪಕ್ಷದ ಅಭ್ಯರ್ಥಿಗಾಗಿ ಪ್ರಚಾರ ಮಾಡುತ್ತಿರುವ ಬಗ್ಗೆ ಕೇಳಿದಾಗ, ರೆಡ್ಡಿ ಅವರನ್ನು 2008ರಿಂದ ಎದುರಿಸಿಕೊಂಡು ಬಂದಿದ್ದೇವೆ, ಅವರು ತನ್ನ ಗೆಲುವಿಗೆ ಥ್ರೆಟ್ ಅನಿಸಲ್ಲ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಸಂಡೂರು ಕ್ಷೇತ್ರದ ಟಿಕೆಟ್​ ಸಂಸದ ಇ ತುಕಾರಾಂ ಪತ್ನಿಗೆ: ಸಿದ್ದರಾಮಯ್ಯ

Published on: Oct 24, 2024 01:32 PM
Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More