ಜನಾರ್ಧನ ರೆಡ್ಡಿಯನ್ನು 2008ರಿಂದ ಎದುರಿಸುತ್ತಿದ್ದೇವೆ, ಅವರಿಂದ ಆತಂಕವಿಲ್ಲ: ಅನ್ನಪೂರ್ಣ
ತಮ್ಮ ಪರ ಪ್ರಚಾರ ಮಾಡಲು ಸಿಎಂ, ಡಿಸಿಎಂ ಮತ್ತು ಇನ್ನೂ ಹಲವಾರು ಪ್ರಮುಖ ನಾಯಕರು ಬರಲಿದ್ದಾರೆಂದ ಅನ್ನಪೂರ್ಣ, ಸಿದ್ದರಾಮಯ್ಯ ಸರ್ಕಾರ ಘೋಷಿಸಿ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡು ಜನರ ಮತ ಕೇಳುವುದಾಗಿ ಹೇಳಿದರು.
ಬಳ್ಳಾರಿ: ಸಂಡೂರು ವಿಧಾನಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಸಂಸದ ಇ ತುಕಾರಾಂ ಅವರ ಪತ್ನಿ ಅನ್ನಪೂರ್ಣ ತುಕಾರಾಂ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡುವಾಗ ತಮ್ಮ ಪಕ್ಷದ ಎಲ್ಲ ಹಿರಿಯ ನಾಯಕರಿಗೆ ಮತ್ತು ಕಾರ್ಯಕರ್ತರಿಗೆ ಧನ್ಯವಾದಗಳನ್ನು ಸಲ್ಲಿಸಿದ್ದರು. ಬಿಜೆಪಿ ಶಾಸಕ ಗಾಲಿ ಜನಾರ್ಧನರೆಡ್ಡಿಯವರು ಸಂಡೂರಲ್ಲಿ ಮನೆ ಮಾಡಿ ಪಕ್ಷದ ಅಭ್ಯರ್ಥಿಗಾಗಿ ಪ್ರಚಾರ ಮಾಡುತ್ತಿರುವ ಬಗ್ಗೆ ಕೇಳಿದಾಗ, ರೆಡ್ಡಿ ಅವರನ್ನು 2008ರಿಂದ ಎದುರಿಸಿಕೊಂಡು ಬಂದಿದ್ದೇವೆ, ಅವರು ತನ್ನ ಗೆಲುವಿಗೆ ಥ್ರೆಟ್ ಅನಿಸಲ್ಲ ಎಂದು ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಸಂಡೂರು ಕ್ಷೇತ್ರದ ಟಿಕೆಟ್ ಸಂಸದ ಇ ತುಕಾರಾಂ ಪತ್ನಿಗೆ: ಸಿದ್ದರಾಮಯ್ಯ
Published on: Oct 24, 2024 01:32 PM
Follow Us
Latest Videos
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ

