AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನಾರ್ಧನ ರೆಡ್ಡಿಯನ್ನು 2008ರಿಂದ ಎದುರಿಸುತ್ತಿದ್ದೇವೆ, ಅವರಿಂದ ಆತಂಕವಿಲ್ಲ: ಅನ್ನಪೂರ್ಣ

ಜನಾರ್ಧನ ರೆಡ್ಡಿಯನ್ನು 2008ರಿಂದ ಎದುರಿಸುತ್ತಿದ್ದೇವೆ, ಅವರಿಂದ ಆತಂಕವಿಲ್ಲ: ಅನ್ನಪೂರ್ಣ

ಅರುಣ್​ ಕುಮಾರ್​ ಬೆಳ್ಳಿ
|

Updated on:Oct 24, 2024 | 2:18 PM

Share

ತಮ್ಮ ಪರ ಪ್ರಚಾರ ಮಾಡಲು ಸಿಎಂ, ಡಿಸಿಎಂ ಮತ್ತು ಇನ್ನೂ ಹಲವಾರು ಪ್ರಮುಖ ನಾಯಕರು ಬರಲಿದ್ದಾರೆಂದ ಅನ್ನಪೂರ್ಣ, ಸಿದ್ದರಾಮಯ್ಯ ಸರ್ಕಾರ ಘೋಷಿಸಿ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡು ಜನರ ಮತ ಕೇಳುವುದಾಗಿ ಹೇಳಿದರು.

ಬಳ್ಳಾರಿ: ಸಂಡೂರು ವಿಧಾನಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಸಂಸದ ಇ ತುಕಾರಾಂ ಅವರ ಪತ್ನಿ ಅನ್ನಪೂರ್ಣ ತುಕಾರಾಂ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡುವಾಗ ತಮ್ಮ ಪಕ್ಷದ ಎಲ್ಲ ಹಿರಿಯ ನಾಯಕರಿಗೆ ಮತ್ತು ಕಾರ್ಯಕರ್ತರಿಗೆ ಧನ್ಯವಾದಗಳನ್ನು ಸಲ್ಲಿಸಿದ್ದರು. ಬಿಜೆಪಿ ಶಾಸಕ ಗಾಲಿ ಜನಾರ್ಧನರೆಡ್ಡಿಯವರು ಸಂಡೂರಲ್ಲಿ ಮನೆ ಮಾಡಿ ಪಕ್ಷದ ಅಭ್ಯರ್ಥಿಗಾಗಿ ಪ್ರಚಾರ ಮಾಡುತ್ತಿರುವ ಬಗ್ಗೆ ಕೇಳಿದಾಗ, ರೆಡ್ಡಿ ಅವರನ್ನು 2008ರಿಂದ ಎದುರಿಸಿಕೊಂಡು ಬಂದಿದ್ದೇವೆ, ಅವರು ತನ್ನ ಗೆಲುವಿಗೆ ಥ್ರೆಟ್ ಅನಿಸಲ್ಲ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಸಂಡೂರು ಕ್ಷೇತ್ರದ ಟಿಕೆಟ್​ ಸಂಸದ ಇ ತುಕಾರಾಂ ಪತ್ನಿಗೆ: ಸಿದ್ದರಾಮಯ್ಯ

Published on: Oct 24, 2024 01:32 PM