ಜನಾರ್ಧನರೆಡ್ಡಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮ, ಕಲೆ ಕರಗತ ಮಾಡಿಕೊಂಡಿದ್ದಾರೆ: ಬಿ ನಾಗೇಂದ್ರ

ಅರುಣ್​ ಕುಮಾರ್​ ಬೆಳ್ಳಿ

Updated on: Oct 17, 2024 | 3:06 PM

ಜೈಲಿನಲ್ಲಿದ್ದಾಗ ಈಡಿ ಅಧಿಕಾರಿಗಳು ವಾಲ್ಮೀಕಿ ನಿಗಮ ಅವ್ಯವಹಾರ ಪ್ರಕರಣದಲ್ಲಿ ಮುಖ್ಯಮಂತ್ರಿ ಇಲ್ಲವೇ ಉಪ ಮುಖ್ಯ,ಮಂತ್ರಿಯ ಹೆಸರು ಹೇಳುವಂತೆ ಒತ್ತಾಯಿಸಿದ್ದು ನಿಜ, ಅದನ್ನು ಸಿದ್ದರಾಮಯ್ಯನವರಿಗೆ ಹೇಳಿದ್ಧೇನೆ, ಮುದೊಂದು ದಿನ ಈ ಪ್ರಕರಣದಿಂದ ಖಲಾಸೆಯಾಗುತ್ತೇನೆ ಎಂದು ನಾಗೇಂದ್ರ ಹೇಳಿದರು.

ಬಳ್ಳಾರಿ: ಜೈಲಿನಿಂದ ಹೊರಬಂದ ನಂತರ ಬಳ್ಳಾರಿಗೆ ವಾಪಸ್ಸಾಗಿರುವ ಮಾಜಿ ಸಚಿವ ಬಿ ನಾಗೇಂದ್ರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದರು. ಹಿಂದೆ ಬಿಜೆಪಿಯಲ್ಲಿದ್ದಾಗ ಆಪ್ತಮಿತ್ರನಾಗಿದ್ದ ಗಾಲಿ ಜನಾರ್ಧನ ರೆಡ್ಡಿ ತಮ್ಮ ವಿರುದ್ಧ ಮಾಡಿರುವ ಕಾಮೆಂಟ್ ಗೆ ಪ್ರತಿಕ್ರಿಯಿಸಿದ ನಾಗೇಂದ್ರ, ಸುಳ್ಳು ಹೇಳೋದ್ರಲ್ಲಿ ರೆಡ್ಡಿ ಪರಿಣಿತರು, ಆ ಕಲೆಯನ್ನು ಅವರು ಕರಗತ ಮಾಡಿಕೊಂಡಿದ್ದಾರೆ ಎಂದರು. ರೆಡ್ಡಿ ಪ್ರಕಾರ ಬಿಜೆಪಿಯಲ್ಲಿರುವಷ್ಟು ದಿನ ಒಳ್ಳೆಯವನಾಗಿದ್ದ ನಾಗೇಂದ್ರ ಕಾಂಗ್ರೆಸ್ ಸೇರಿದ ಕೂಡಲೇ ಕೆಟ್ಟವನಾಗಿದ್ದಾನೆ ಎಂದು ಅವರು ಮಾರ್ಮಿಕವಾಗಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ದೇಶದಲ್ಲಿ ಕಾಂಗ್ರೆಸ್ ಪಕ್ಷದ ಸರ್ಕಾರಗಳ ಅಸ್ಥಿರಕ್ಕೆ ಬಿಜೆಪಿ ಷಡ್ಯಂತ್ರ: ಮಾಜಿ ಸಚಿವ ನಾಗೇಂದ್ರ ಆರೋಪ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.