ಮಂಗಳೂರು: ಭಾರಿ ಮಳೆಗೆ ದ್ವೀಪದಂತಾದ ಜಪ್ಪಿನಮೊಗರು, ಮನೆಗಳಿಗೆ ನೀರು ನುಗ್ಗಿ ಅವಾಂತರ

Edited By:

Updated on: May 30, 2025 | 2:16 PM

Mangaluru Rains and Flood: 2018 ರಲ್ಲಿ ಮಂಗಳೂರಿನ ಜಪ್ಪಿನಮೊಗರಿನಲ್ಲಿ ಭಾರಿ ಪ್ರವಾಹ ಸೃಷ್ಟಿಯಾಗಿತ್ತು. ಇದೀಗ ಮತ್ತೆ ಅಂಥದ್ದೇ ಪರಿಸ್ಥಿತಿ ಸೃಷ್ಟಿಯಾಗಿದೆ. ಸುಮಾರು ಏಳು ವರ್ಷಗಳ ಬಳಿಕ ಮತ್ತೆ ಸೃಷ್ಟಿಯಾಗಿರುವ ಪ್ರವಾಹ ಪರಿಸ್ಥಿತಿಯಿಂದ ಜನ ಕಂಗಾಲಾಗಿದ್ದಾರೆ. ಜಪ್ಪಿನಮೊಗರು ಪ್ರವಾಹ ಪರಿಸ್ಥಿತಿಯ ವಿಡಿಯೋ ಇಲ್ಲಿದೆ.

ಮಂಗಳೂರು, ಮೇ 30: ಭಾರಿ ಮಳೆಯ ಕಾರಣ ಪ್ರವಾಹ ರಿಸ್ಥಿತಿ ಸೃಷ್ಟಿಯಾಗಿದ್ದು, ಮಂಗಳೂರಿನ ಜಪ್ಪಿನಮೊಗರು ಪ್ರದೇಶ ದ್ವೀಪದಂತಾಗಿದೆ. ಮನೆಗಳಿಗೆ ನೀರು ನುಗ್ಗಿದ್ದು, ನಿವಾಸಿಗಳು ಪರದಾಡುವಂತಾಗಿದೆ. ಜಪ್ಪಿನಮೊಗರು ಜಲಾವೃತಗೊಂಡು ನಡುಗಡ್ಡೆಯಂತಾಗಿದೆ. ಜನ ಮನೆಯ ಟೆರೇಸ್ ಮೇಲೆ ಆಶ್ರಯ ಪಡೆದಿದ್ದಾರೆ. ಮಳೆ ಇನ್ನಷ್ಟು ಹೆಚ್ಚಾಗುವ ಆತಂಕದಲ್ಲಿ ನಿವಾಸಿಗಳಿದ್ದಾರೆ. ಜಪ್ಪಿನಮೊಗರು ಊರಿನ ಟಾಪ್ ಆ್ಯಂಗಲ್ ದೃಶ್ಯ ‘ಟಿವಿ9’ ಕ್ಯಾಮರಾದಲ್ಲಿ ಸೆರೆಯಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ashok

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸುದ್ದಿಬಿಡುಗಡೆ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಪ್ರಜಾ ಟಿ.ವಿಯ ಉಡುಪಿ ಜಿಲ್ಲಾ ವರದಿಗಾರರಾಗಿ ಒಂದು ವರ್ಷ ಏಳು ತಿಂಗಳು ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ, ಒಂದು ವರ್ಷ ನಾಲ್ಕು ತಿಂಗಳಿನಿಂದ ಟಿ.ವಿ 9 ವಾಹಿನಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ ಇಂಡಿಯಾ ಟೆಲಿವಿಷನ್​ . ಕಾಮ್​ 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More