ಚಂದ್ರಯಾನ-3 ಲ್ಯಾಂಡರ್ ವಿಕ್ರಮ್ ಸಾಫ್ಟ್ ಲ್ಯಾಂಡಿಂಗ್ ಪ್ರಕ್ರಿಯೆ ಹಂತಗಳನ್ನು ವಿವರಿಸಿದ ನೆಹರೂ ತಾರಾಲಯದ ನಿರ್ದೇಶಕ ಪ್ರಮೋದ ಗಲಗಲಿ

ಈ ಬಾರಿ ಲ್ಯಾಂಡರ್ ನಿಧಾನ ಗತಿಯಲ್ಲಿ ಅಂದರೆ 220 ಕಿಮಿ/ಗಂಟೆ ವೇಗದಲ್ಲಿ ಇಳಿಯುತ್ತಾ ತನ್ನ ಸೆನ್ಸರ್ ಗಳ ಮೂಲಕ ವೇಗವನ್ನು ಮತ್ತಷ್ಟು ಕುಂಠಿತಗೊಳಿಸಿಕೊಳ್ಳುತ್ತಾ ಹೆಲಿಕ್ಯಾಪ್ಟರ್ ನಂತೆ ಚಂದ್ರನ ಮೇಲ್ಮೈಯಲ್ಲಿ ಸುತ್ತುತ್ತಾ ನಿಧಾನವಾಗಿ ಲ್ಯಾಂಡ್ ಅಗಲಿದೆ. ಅದು ಎಷ್ಟು ನಿಧಾನಗತಿಯಲ್ಲಿ ಲ್ಯಾಂಡ್ ಅಗುತ್ತದೆಂದರೆ, ಲ್ಯಾಂಡರ್ ಒಳಗಿನ ಯಾವುದೇ ಕಾಂಪೋನೆಂಟ್ ಗೆ ಹಾನಿಯುಂಟಾಗುವುದಿಲ್ಲ ಎಂದು ಗಲಗಲಿ ಹೇಳಿದರು,

ಚಂದ್ರಯಾನ-3 ಲ್ಯಾಂಡರ್ ವಿಕ್ರಮ್ ಸಾಫ್ಟ್ ಲ್ಯಾಂಡಿಂಗ್ ಪ್ರಕ್ರಿಯೆ ಹಂತಗಳನ್ನು ವಿವರಿಸಿದ ನೆಹರೂ ತಾರಾಲಯದ ನಿರ್ದೇಶಕ ಪ್ರಮೋದ ಗಲಗಲಿ
|

Updated on: Aug 22, 2023 | 6:46 PM

ಬೆಂಗಳೂರು: ಕೇವಲ ಭಾರತ ಮಾತ್ರವಲ್ಲ, ಇಡೀ ವಿಶ್ವದ ಬಾಹ್ಯಾಕಾಶ ವಿಜ್ಞಾನ ಮತ್ತು ತಂತ್ರಜ್ಞಾನದ ಇತಿಹಾಸದಲ್ಲಿ ನಾಳೆ ಅಂದರೆ ಬುಧವಾರ ಒಂದು ಮಹತ್ವದ ದಿನ ಅನಿಸಿಕೊಳ್ಳಲಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) (ISRO) ಮಹತ್ವಾಕಾಂಕ್ಷೆಯ ಮಿಷನ್ ಚಂದ್ರಯಾನ-3 (Chandrayaan-3) ಲ್ಯಾಂಡರ್ ವಿಕ್ರಮ ನಾಳೆ ಚಂದ್ರನ ದಕ್ಷಿಣ ಧ್ರುವದಲ್ಲಿ (South Pole) ಲ್ಯಾಂಡ್ ಆಗಲಿದೆ. ಲ್ಯಾಂಡಿಂಗ್ ಪ್ರಕ್ರಿಯೆಯಲ್ಲಿ ಯಾವುದೇ ಅಡಚಣೆ ವ್ಯತ್ಯಯ ಉಂಟಾಗದಿರಲಿ ಅಂತ ಇಡೀ ಭಾರತ ಪ್ರಾರ್ಥಿಸುತ್ತಿದೆ. ಏತನ್ಮಧ್ಯೆ, ಟಿವಿ9 ಕನ್ನಡ ವಾಹಿನಿಯ ಬೆಂಗಳೂರು ವರದಿಗಾರ ನಗರದಲ್ಲಿರುವ ಜವಾಹರಲಾಲ ನೆಹರೂ ತಾರಾಲಯದ ನಿರ್ದೇಶಕ ಪ್ರಮೋದ ಗಲಗಲಿ ಅವರೊಂದಿಗೆ ನಾಳಿನ ಮೈಲಿಗಲ್ಲು ಬಗ್ಗೆ ಹಲವು ವಿಷಯಗಳನ್ನು ಚರ್ಚಿಸಿದ್ದು ಅವರು ಲ್ಯಾಂಡಿಂಗ್ ಹಂತದ ಪ್ರತಿಯೊಂದು ಅಂಶ ಮತ್ತು ಸೂಕ್ಷ್ಮತೆಯನ್ನು ವಿವರಿಸಿದ್ದಾರೆ. ಕಳೆದ ಸಲ ಅಂದರೆ ಚಂದ್ರಯಾನ- 1ರಲ್ಲಿ ಮೂನ್ ಇಂಪ್ಯಾಕ್ಟ್ ಪ್ರೋಬ್ ನಿಧಾನಗತಿಯಲ್ಲಿ ಲ್ಯಾಂಡ್ ಆಗದೆ ಅಪ್ಪಳಿಸಿದ್ದರಿಂದ ಮಿಷನ್ ವಿಫಲವಾಗಿತ್ತು. ಅದರೆ ಈ ಬಾರಿ ಲ್ಯಾಂಡರ್ ನಿಧಾನ ಗತಿಯಲ್ಲಿ ಅಂದರೆ 220 ಕಿಮಿ/ಗಂಟೆ ವೇಗದಲ್ಲಿ ಇಳಿಯುತ್ತಾ ತನ್ನ ಸೆನ್ಸರ್ ಗಳ ಮೂಲಕ ವೇಗವನ್ನು ಮತ್ತಷ್ಟು ಕುಂಠಿತಗೊಳಿಸಿಕೊಳ್ಳುತ್ತಾ ಹೆಲಿಕ್ಯಾಪ್ಟರ್ ನಂತೆ ಚಂದ್ರನ ಮೇಲ್ಮೈಯಲ್ಲಿ ಸುತ್ತುತ್ತಾ ನಿಧಾನವಾಗಿ ಲ್ಯಾಂಡ್ ಅಗಲಿದೆ. ಅದು ಎಷ್ಟು ನಿಧಾನಗತಿಯಲ್ಲಿ ಲ್ಯಾಂಡ್ ಅಗುತ್ತದೆಂದರೆ, ಲ್ಯಾಂಡರ್ ಒಳಗಿನ ಯಾವುದೇ ಕಾಂಪೋನೆಂಟ್ ಗೆ ಹಾನಿಯುಂಟಾಗುವುದಿಲ್ಲ ಎಂದು ಹೇಳಿದ ಗಲಗಲಿ ಇದನ್ನೇ ಸಾಫ್ಟ್ ಲ್ಯಾಂಡಿಂಗ್ ಅಂತ ಕರೆಯೋದು ಅನ್ನುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow us
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್
ಹೆಣ್ಣಿಗಾಗಿ ಬದುಕು ಹಾಳುಮಾಡಿಕೊಂಡೆಯಲ್ಲ ಎಂದ ಹುಬ್ಬಳ್ಳಿಯ ದರ್ಶನ್ ಅಭಿಮಾನಿ
ಹೆಣ್ಣಿಗಾಗಿ ಬದುಕು ಹಾಳುಮಾಡಿಕೊಂಡೆಯಲ್ಲ ಎಂದ ಹುಬ್ಬಳ್ಳಿಯ ದರ್ಶನ್ ಅಭಿಮಾನಿ
ಬೀದರ್​​: ಅಂತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪ್ರತ್ಯ
ಬೀದರ್​​: ಅಂತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪ್ರತ್ಯ
ವಾಪಸ್ಸಾಗಲು ಬಿಜೆಪಿಯಿಂದ ಕರೆ ಬಂದಿದೆ, ಅಭಿಪ್ರಾಯ ತಿಳಿಸಿಲ್ಲ: ಈಶ್ವರಪ್ಪ
ವಾಪಸ್ಸಾಗಲು ಬಿಜೆಪಿಯಿಂದ ಕರೆ ಬಂದಿದೆ, ಅಭಿಪ್ರಾಯ ತಿಳಿಸಿಲ್ಲ: ಈಶ್ವರಪ್ಪ
ರಿಲಯನ್ಸ್​​ ಜಿಯೋ ರೀಚಾರ್ಜ್ ಪ್ಲ್ಯಾನ್ ಆಯ್ತು ದುಬಾರಿ | ಶೇ 22ರಷ್ಟು ಬೆಲೆ
ರಿಲಯನ್ಸ್​​ ಜಿಯೋ ರೀಚಾರ್ಜ್ ಪ್ಲ್ಯಾನ್ ಆಯ್ತು ದುಬಾರಿ | ಶೇ 22ರಷ್ಟು ಬೆಲೆ
ಚಾರ್ಮಾಡಿ ಘಾಟ್ ಇಳುಕಲು ಪ್ರದೇಶದ ಜಲಪಾತಗಳಲ್ಲಿ ಯುವಕರ ಅಪಾಯಕಾರಿ ಹುಚ್ಚಾಟ
ಚಾರ್ಮಾಡಿ ಘಾಟ್ ಇಳುಕಲು ಪ್ರದೇಶದ ಜಲಪಾತಗಳಲ್ಲಿ ಯುವಕರ ಅಪಾಯಕಾರಿ ಹುಚ್ಚಾಟ
ವಿಧಾನಸಭೆಯಲ್ಲಿ ಮೆಜಾರಿಟಿಯ ಕಾರಣ ಸಿದ್ದರಾಮಯ್ಯ ಸೇಫ್ ಆಗಿದ್ದಾರೆ: ಸಿಟಿ ರವಿ
ವಿಧಾನಸಭೆಯಲ್ಲಿ ಮೆಜಾರಿಟಿಯ ಕಾರಣ ಸಿದ್ದರಾಮಯ್ಯ ಸೇಫ್ ಆಗಿದ್ದಾರೆ: ಸಿಟಿ ರವಿ
ದೇವರಮನೆ, ಚಾರ್ಮಾಡಿಯಲ್ಲಿ ರಸ್ತೆ ಮಧ್ಯೆ ವಾಹನ ನಿಲ್ಸಿ ಪ್ರವಾಸಿಗರ ಹುಚ್ಚಾಟ
ದೇವರಮನೆ, ಚಾರ್ಮಾಡಿಯಲ್ಲಿ ರಸ್ತೆ ಮಧ್ಯೆ ವಾಹನ ನಿಲ್ಸಿ ಪ್ರವಾಸಿಗರ ಹುಚ್ಚಾಟ
ಕೊರಗಜ್ಜ ಸನ್ನಿಧಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ರಕ್ಷಿತ್ ಶೆಟ್ಟಿ
ಕೊರಗಜ್ಜ ಸನ್ನಿಧಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ರಕ್ಷಿತ್ ಶೆಟ್ಟಿ
ಕಾರಲ್ಲಿ ಬಂದು ಪಾಟ್ ಕದಿಯುವ ಕಪಲ್ಸ್; ಸಿಸಿ ಟಿವಿಯಲ್ಲಿ ಸೆರೆ
ಕಾರಲ್ಲಿ ಬಂದು ಪಾಟ್ ಕದಿಯುವ ಕಪಲ್ಸ್; ಸಿಸಿ ಟಿವಿಯಲ್ಲಿ ಸೆರೆ