AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಬರಿ ಮಸೀದಿ ನಿರ್ಮಿಸಲು ನೆಹರು ಸಾರ್ವಜನಿಕ ನಿಧಿಯನ್ನು ಕೋರಿದ್ದರು; ಕೇಂದ್ರ ಸಚಿವ ರಾಜನಾಥ್ ಸಿಂಗ್

ಬಾಬರಿ ಮಸೀದಿ ನಿರ್ಮಿಸಲು ನೆಹರು ಸಾರ್ವಜನಿಕ ನಿಧಿಯನ್ನು ಕೋರಿದ್ದರು; ಕೇಂದ್ರ ಸಚಿವ ರಾಜನಾಥ್ ಸಿಂಗ್

ಸುಷ್ಮಾ ಚಕ್ರೆ
|

Updated on: Dec 03, 2025 | 4:48 PM

Share

ಪಂಡಿತ್ ಜವಾಹರಲಾಲ್ ನೆಹರು ಅವರು ಸಾರ್ವಜನಿಕ ನಿಧಿಯನ್ನು ಬಳಸಿಕೊಂಡು ಬಾಬರಿ ಮಸೀದಿಯನ್ನು ನಿರ್ಮಿಸಲು ಬಯಸಿದ್ದರು. ಈ ಪ್ರಸ್ತಾಪವನ್ನು ವಿರೋಧಿಸಿದವರೆಂದರೆ ಗುಜರಾತಿ ತಾಯಿಗೆ ಜನಿಸಿದ ಸರ್ದಾರ್ ವಲ್ಲಭಭಾಯಿ ಪಟೇಲ್. ಅವರು ಸಾರ್ವಜನಿಕ ನಿಧಿಯನ್ನು ಬಳಸಿಕೊಂಡು ಬಾಬರಿ ಮಸೀದಿಯನ್ನು ನಿರ್ಮಿಸಲು ಅನುಮತಿಸಲಿಲ್ಲ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.

ನವದೆಹಲಿ, ಡಿಸೆಂಬರ್ 3: ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರು ಬಾಬರಿ ಮಸೀದಿ ನಿರ್ಮಿಸಲು ಸಾರ್ವಜನಿಕ ನಿಧಿಯನ್ನು ಕೋರಿದ್ದರು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಹೇಳಿದ್ದಾರೆ. ನೆಹರು ಅವರ ಈ ಕೋರಿಕೆಗೆ ಸರ್ದಾರ್ ವಲ್ಲಭಭಾಯಿ ಪಟೇಲ್ ಒಪ್ಪದೆ, ಈ ಯೋಜನೆಯನ್ನು ಮುಂದುವರಿಸದಂತೆ ತಡೆದಿದ್ದರು ಎಂದಿದ್ದಾರೆ. ಸರ್ದಾರ್ ಪಟೇಲ್ ಅವರ 150ನೇ ಜನ್ಮ ದಿನಾಚರಣೆಯ ಸ್ಮರಣಾರ್ಥ ಗುಜರಾತ್‌ನಲ್ಲಿ ನಡೆದ ‘ಏಕತಾ ಮೆರವಣಿಗೆ’ಯಲ್ಲಿ ಮಂಗಳವಾರ ಕೇಂದ್ರ ಸಚಿವ ರಾಜನಾಥ್ ಸಿಂಗ್ ಈ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ತೀವ್ರ ಚರ್ಚೆಗೆ ಕಾರಣವಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More