ಮೊದಲ ಬಾರಿಗೆ ಮಹಿಳೆಗೆ ‘ಕರ್ನಾಟಕ ರತ್ನ’ ಪ್ರಶಸ್ತಿ: ಜಯಮಾಲಾ, ಶ್ರುತಿ, ಮಾಳವಿಕಾ ಸಂತಸ
‘ಕರ್ನಾಟಕ ರತ್ನ’ ಪಡೆದ ಮೊದಲ ಮಹಿಳೆ ಎಂಬ ಖ್ಯಾತಿಗೆ ಬಿ. ಸರೋಜಾದೇವಿ ಅವರು ಪಾತ್ರರಾಗಿದ್ದಾರೆ. ಇತ್ತೀಚೆಗೆ ಅವರಿಗೆ ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಪ್ರಶಸ್ತಿ ಘೋಷಿಸಲಾಯಿತು. ಸರೋಜಾದೇವಿ ಅವರಿಗೆ ಈ ಪ್ರಶಸ್ತಿ ನೀಡಬೇಕು ಎಂದು ಮಾಳವಿಕಾ ಅವಿನಾಶ್, ಜಯಮಾಲಾ, ಶ್ರುತಿ ಅವರು ಸರ್ಕಾರಕ್ಕೆ ಮನವಿ ಮಾಡಿದ್ದರು.
‘ಕರ್ನಾಟಕ ರತ್ನ’ ಪ್ರಶಸ್ತಿ ಪಡೆದ ಮೊದಲ ಮಹಿಳೆ ಎಂಬ ಖ್ಯಾತಿಗೆ ನಟಿ ಬಿ. ಸರೋಜಾದೇವಿ (B Saroja Devi) ಅವರು ಪಾತ್ರರಾಗಿದ್ದಾರೆ. ಇತ್ತೀಚೆಗೆ ಅವರಿಗೆ ಮರಣೋತ್ತರವಾಗಿ ‘ಕರ್ನಾಟಕ ರತ್ನ’ (Karnataka Ratna) ಘೋಷಿಸಲಾಯಿತು. ಸರೋಜಾದೇವಿ ಅವರಿಗೆ ಈ ಪ್ರಶಸ್ತಿ ನೀಡಬೇಕು ಎಂದು ಮಾಳವಿಕಾ ಅವಿನಾಶ್, ಜಯಮಾಲಾ, ಶ್ರುತಿ ಅವರು ಸರ್ಕಾರಕ್ಕೆ ಮನವಿ ಮಾಡಿದ್ದರು. ಈಗ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ಸರೋಜಾದೇವಿ ಅವರು ಮಹಾನ್ ಕಲಾವಿದೆ ಆಗಿದ್ದರು. ನಮಗೆ ಮಹಿಳೆಯರಾಗಿ ಸಂತೋಷ ಏನೆಂದರೆ, ಮೊದಲ ಬಾರಿಗೆ ಮಹಿಳೆಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ಸರ್ಕಾರ ನೀಡಿದೆ. ಮಹಿಳೆಯ ಸಾಧನೆಯನ್ನೂ ಸರ್ಕಾರ ಗುರುತಿಸುತ್ತದೆ ಎಂಬುದಕ್ಕೆ ಇದು ಸಾಕ್ಷಿ ಆಗಿದೆ’ ಎಂದು ಜಯಮಾಲಾ (Jayamala) ಅವರು ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
