‘ಕೆಂಡ’ ಸಿನಿಮಾಗೆ ಜಯಂತ್ ಕಾಯ್ಕಿಣಿ ಪುತ್ರ ರಿತ್ವಿಕ್​ ಸಂಗೀತ ನಿರ್ದೇಶನ

ಖ್ಯಾತ ಗೀತರಚನಕಾರ ಜಯಂತ ಕಾಯ್ಕಿಣಿ ಅವರ ಪುತ್ರ ರಿತ್ವಿಕ್ ಕಾಯ್ಕಿಣಿ ಸಂಗೀತ ನಿರ್ದೇಶಕನಾಗಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ನೀಡಿದ್ದಾರೆ. ‘ಕೆಂಡ’ ಸಿನಿಮಾಗೆ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದ ಹಾಡು ಬಿಡುಗಡೆ ಆಗಿದ್ದು, ಆ ಗೀತೆಗೆ ಜಯಂತ್ ಕಾಯ್ಕಿಣಿ ಸಾಹಿತ್ಯ ಬರೆದಿದ್ದಾರೆ. ಸಾಂಗ್​ ಬಿಡುಗಡೆ ವೇಳೆ ಪುತ್ರನ ಬಗ್ಗೆ ಜಯಂತ ಕಾಯ್ಕಿಣಿ ಅವರು ಮಾತನಾಡಿದ್ದಾರೆ.

‘ಕೆಂಡ’ ಸಿನಿಮಾಗೆ ಜಯಂತ್ ಕಾಯ್ಕಿಣಿ ಪುತ್ರ ರಿತ್ವಿಕ್​ ಸಂಗೀತ ನಿರ್ದೇಶನ
|

Updated on: Mar 14, 2024 | 10:47 PM

ಸಹದೇವ ಕೆಲವಡಿ ಅವರು ನಿರ್ದೇಶನ ಮಾಡಿರುವ ‘ಕೆಂಡ’ (Kenda) ಸಿನಿಮಾಗೆ ರಿತ್ವಿಕ್​ ಕಾಯ್ಕಿಣಿ (Ritwik Kaikini) ಅವರು ಸಂಗೀತ ನೀಡಿದ್ದಾರೆ. ಈ ಮೂಲಕ ಮ್ಯೂಸಿಕ್​ ಡೈರೆಕ್ಟರ್​ ಆಗಿ ಅವರು ಸ್ಯಾಂಡಲ್​ವುಡ್​ಗೆ ಪರಿಚಿತರಾಗುತ್ತಿದ್ದಾರೆ. ಈ ಸಿನಿಮಾದ ‘ತಾಜಾ ಸುದ್ದಿ..’ ಹಾಡು ಬಿಡುಗಡೆ ಆಗಿದೆ. ಜಯಂತ್​ ಕಾಯ್ಕಿಣಿ (Jayanth Kaikini) ಬರೆದ ಈ ಹಾಡಿಗೆ ಅನನ್ಯಾ ಭಗತ್​ ಹಾಗೂ ರಿತ್ವಿಕ್​ ಕಾಯ್ಕಿಣಿ ಧ್ವನಿ ನೀಡಿದ್ದಾರೆ. ‘ಡಿ-ಬೀಟ್ಸ್​’ ಮೂಲಕ ಈ ಸಾಂಗ್​ ರಿಲೀಸ್​ ಆಗಿದೆ. ನಿರ್ದೇಶಕ ಯೋಗರಾಜ್​ ಭಟ್​, ಸಂಗೀತ ನಿರ್ದೇಶಕ ಹರಿಕೃಷ್ಣ, ಶೈಲಜಾ ನಾಗ್​ ಅವರು ಹಾಡಿನ ಬಿಡುಗಡೆ ಕಾರ್ಯಕ್ರಮಕ್ಕೆ ಬಂದು ಶುಭ ಹಾರೈಸಿದ್ದಾರೆ. ‘ಅಮೆಯುಕ್ತಿ ಸ್ಟುಡಿಯೋಸ್​’ ಮೂಲಕ ರೂಪಾ ರಾವ್​ ಮತ್ತು ಸಹದೇವ್​ ಕೆಲವಡಿ ಅವರು ‘ಕೆಂಡ’ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ಬಿ.ವಿ. ಭರತ್​, ಪ್ರಣವ್​ ಶ್ರೀಧರ್​, ವಿನೋದ್​, ಗೋಪಾಲಕೃಷ್ಣ ದೇಶಪಾಂಡೆ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

‘ನಾನು ಸಾಹಿತಿಯಾಗಿ ಮಾತನಾಡಬಹುದು. ಆದರೆ ತಂದೆಯಾಗಿ ಮಾತನಾಡಿದರೆ ಮನೆಗೆ ಹೋದಮೇಲೆ ನಾನೇ ಪೆಟ್ಟು ತಿನ್ನಬೇಕಾಗುತ್ತದೆ. ಇದು ನನಗೆ ತುಂಬಾ ಕೌಟುಂಬಿಕವಾದ ಕ್ಷಣ. ಎಷ್ಟೋ ವರ್ಷಗಳ ಹಿಂದೆ ಇದೇ ರೀತಿಯ ಬಾಂಧವ್ಯ ಶೈಲಜಾ ನಾಗ್​, ಬಿ. ಸುರೇಶ ಹಾಗೂ ಯೋಗರಾಜ್​ ಭಟ್​ ಅವರ ನಡುವೆ ಮೂಡಿತ್ತು. ಈಗ ರಿತ್ವಿಕ್​ ಹಾಗೂ ಸಹದೇವ್​ ಅವರ ಪಯಣ ಶುರುವಾಗಿದೆ. ರಿತ್ವಿಕ್​ ಬಗ್ಗೆ ನನಗೆ ಖುಷಿಯಾಗುತ್ತದೆ. ಅವನಿಗೆ ಇಷ್ಟವಾದ ಕೆಲಸ ಮಾಡುತ್ತಿದ್ದಾನೆ. ಅದಕ್ಕೆ ಉತ್ತಮವಾದ ಸಹಯೋಗ ಸಿಕ್ಕಿದೆ’ ಎಂದು ಜಯಂತ್​ ಕಾಯ್ಕಿಣಿ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
Jog Falls: ಹಾಲ್ನೊರೆಯಂತೆ ಕಂಗೊಳಿಸುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ
Jog Falls: ಹಾಲ್ನೊರೆಯಂತೆ ಕಂಗೊಳಿಸುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ
ಸಿಎಂ ಪತ್ನಿ ಅಣ್ಣ ನಕಲಿ ಕಾಗದಪತ್ರ ಸೃಷ್ಟಿಸಿದ್ದಾರೆ: ಆರ್​ಟಿಐ ಕಾರ್ಯಕರ್ತ
ಸಿಎಂ ಪತ್ನಿ ಅಣ್ಣ ನಕಲಿ ಕಾಗದಪತ್ರ ಸೃಷ್ಟಿಸಿದ್ದಾರೆ: ಆರ್​ಟಿಐ ಕಾರ್ಯಕರ್ತ
ಪ್ರಾಂಶುಪಾಲಕಿಯನ್ನು ಬಲವಂತವಾಗಿ ಹೊರತಬ್ಬಿದ ಶಾಲಾ ಆಡಳಿತ ಮಂಡಳಿ
ಪ್ರಾಂಶುಪಾಲಕಿಯನ್ನು ಬಲವಂತವಾಗಿ ಹೊರತಬ್ಬಿದ ಶಾಲಾ ಆಡಳಿತ ಮಂಡಳಿ
Video: 60 ದಶಕದ ಹಾಡನ್ನು ರೀ ಕ್ರಿಯೇಟ್ ಮಾಡಿದ ಮುಕೇಶ್ ಹಾಗೂ ನೀತಾ ದಂಪತಿ
Video: 60 ದಶಕದ ಹಾಡನ್ನು ರೀ ಕ್ರಿಯೇಟ್ ಮಾಡಿದ ಮುಕೇಶ್ ಹಾಗೂ ನೀತಾ ದಂಪತಿ
ಮುಂಡರಗಿಯ ಸಿಂಗಟಾಲೂರ್ ಬ್ಯಾರೇಜ್ ಭರ್ತಿ, 45,000 ಕ್ಯೂಸೆಕ್ಸ್ ನೀರು ನದಿಗೆ
ಮುಂಡರಗಿಯ ಸಿಂಗಟಾಲೂರ್ ಬ್ಯಾರೇಜ್ ಭರ್ತಿ, 45,000 ಕ್ಯೂಸೆಕ್ಸ್ ನೀರು ನದಿಗೆ