Karnataka Budget 2024; ಬಜೆಟ್ ಮಂಡಿಸುವಾಗ ಸಭಾತ್ಯಾಗ ಮಾಡಿ ಜೆಡಿಎಸ್ ಮತ್ತು ಬಿಜೆಪಿ ಶಾಸಕರು ಹೊಸ ಸಂಪ್ರದಾಯ ಆರಂಭಿಸಿದ್ದಾರೆ: ಲಕ್ಷ್ಮಿ ಹೆಬ್ಬಾಳ್ಕರ್

ಅರುಣ್​ ಕುಮಾರ್​ ಬೆಳ್ಳಿ

Updated on: Feb 16, 2024 | 4:41 PM

Karnataka Budget 2024: ವಿರೋಧ ಪಕ್ಷದ ನಾಯಕರು ಸಭಾತ್ಯಾಗ ಮಾಡಿದ್ದನ್ನು ಗೇಲಿ ಮಾಡಿದ ಹೆಬ್ಬಾಳ್ಕರ್, ಯಾವುದೇ ರಾಜ್ಯದಲ್ಲಿ ಅಥವಾ ಕೇಂದ್ರದಲ್ಲಿ ಬಜೆಟ್ ಮಂಡಿಸುವಾಗ ಯಾರೂ ಸಭಾತ್ಯಾಗ ಮಾಡಲ್ಲ, ಆದರೆ ರಾಜ್ಯದ ಜೆಡಿಎಸ್ ಮತ್ತು ಬಿಜೆಪಿ ನಾಯಕರು ಒಂದು ಹೊಸ ಪರಂಪರೆಗೆ ನಾಂದಿ ಹಾಡಿದ್ದಾರೆ, ಅವರು ಏನಾದರೂ ಮಾಡಿಕೊಳ್ಳಲಿ, ಜನರಂತೂ ಅವರ ವರ್ತನೆಗಳನ್ನು ಗಮನಿಸುತ್ತಿದ್ದಾರೆ ಎಂದು ಹೇಳಿದರು.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಇವತ್ತು ಮಂಡಿಸಿದ ಕರ್ನಾಟಕ ಬಜೆಟ್ 2024 ಬಗ್ಗೆ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ. ನೀವು ನೋಡಿರಬಹುದು, ಬಜೆಟ್ ಮಂಡನೆಯಾಗುತ್ತಿರುವಾಗಲೇ ಜೆಡಿಎಸ್ ಮತ್ತು ಬಿಜೆಪಿ ಶಾಸಕರು ಸಭಾತ್ಯಾಗ (walkout) ಮಾಡಿದರು, ಆದರೆ ಆಡಳಿತ ಪಕ್ಷದ ನಾಯಕರಿಗೆ ಬಜೆಟ್ ಸಹಜವಾಗೇ ಸಂತೋಷ ನೀಡಿದೆ. ವಿಧಾನ ಸಭೆಯ ಆವರಣದಲ್ಲಿ ಟಿವಿ9 ಕನ್ನಡ ಪ್ರತಿನಿಧಿಯೊಂದಿಗೆ ಮಾತಾಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಅವರು ಸಿದ್ದರಾಮಯ್ಯನವರ ಬಜೆಟ್ ಖುಷಿ ನೀಡಿದೆ, ತೃಪ್ತಿ ತಂದಿದೆ ಎಂದು ಹೇಳಿದರು. ಕೇಂದ್ರ ಸರ್ಕಾರದಿಂದ ಯಾವುದೇ ನೆರವಿಲ್ಲದಿದ್ದರೂ, ಎಲ್ಲ ವರ್ಗಗಳನ್ನು ಸರಿದೂಗಿಸಿಕೊಂಡು ಹೋಗುವ ಅತ್ಯುತ್ತಮ ಬಜೆಟ್ ಅನ್ನು ಮುಖ್ಯಮಂತ್ರಿ ನೀಡಿದ್ದಾರೆ ಎಂದು ಅವರು ಹೇಳಿದರು. ವಿರೋಧ ಪಕ್ಷದ ನಾಯಕರು ಸಭಾತ್ಯಾಗ ಮಾಡಿದ್ದನ್ನು ಗೇಲಿ ಮಾಡಿದ ಹೆಬ್ಬಾಳ್ಕರ್, ಯಾವುದೇ ರಾಜ್ಯದಲ್ಲಿ ಅಥವಾ ಕೇಂದ್ರದಲ್ಲಿ ಬಜೆಟ್ ಮಂಡಿಸುವಾಗ ಯಾರೂ ಸಭಾತ್ಯಾಗ ಮಾಡಲ್ಲ, ಆದರೆ ರಾಜ್ಯದ ಜೆಡಿಎಸ್ ಮತ್ತು ಬಿಜೆಪಿ ನಾಯಕರು ಒಂದು ಹೊಸ ಪರಂಪರೆಗೆ ನಾಂದಿ ಹಾಡಿದ್ದಾರೆ, ಅವರು ಏನಾದರೂ ಮಾಡಿಕೊಳ್ಳಲಿ, ಜನರಂತೂ ಅವರ ವರ್ತನೆಗಳನ್ನು ಗಮನಿಸುತ್ತಿದ್ದಾರೆ ಎಂದು ಹೇಳಿದರು. ತಮ್ಮ ಇಲಾಖೆಗೆ ಸಿಕ್ಕಿರುವ ಅನುದಾನಗಳಿಗೆ ಸಚಿವೆ ಸಂತಸ ವ್ಯಕ್ತಪಡಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.