AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Koppal News; ಸರ್ಕಾರದ ಕಾರ್ಯವೈಖರಿಗೆ ಮನಸೋತ ಜೆಡಿಎಸ್ ಮತ್ತು ಬಿಜೆಪಿ ಶಾಸಕರು ಕಾಂಗ್ರೆಸ್ ಸೇರಲು ತವಕಿಸುತ್ತಿದ್ದಾರೆ: ಶಿವರಾಜ ತಂಗಡಗಿ, ಸಚಿವ

Koppal News; ಸರ್ಕಾರದ ಕಾರ್ಯವೈಖರಿಗೆ ಮನಸೋತ ಜೆಡಿಎಸ್ ಮತ್ತು ಬಿಜೆಪಿ ಶಾಸಕರು ಕಾಂಗ್ರೆಸ್ ಸೇರಲು ತವಕಿಸುತ್ತಿದ್ದಾರೆ: ಶಿವರಾಜ ತಂಗಡಗಿ, ಸಚಿವ

ಅರುಣ್​ ಕುಮಾರ್​ ಬೆಳ್ಳಿ
|

Updated on: Jul 25, 2023 | 6:07 PM

ಮುಂದಿನ 10-15 ವರ್ಷಗಳ ಕಾಲ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬರೋದು ಸಾಧ್ಯವಿಲ್ಲ ಎಂದು ಸಚಿವ ತಂಗಡಗಿ ಹೇಳಿದರು.

ಕೊಪ್ಪಳ: ‘ಆಪರೇಶನ್ ಸಿಂಗಾಪೂರ’ ಅನ್ನೋದು ಬರೀ ಊಹಾಪೋಹ, ಬಿಜೆಪಿ ನಾಯಕರು ಹಗಲುಗನಸು ಕಾಣುತ್ತಿದ್ದಾರೆ, ಅವರಂದುಕೊಂಡಂತೆ ಏನೂ ನಡೆಯೋದಿಲ್ಲ, ಜನ ನಮಗೆ 135 ಸೀಟುಗಳನ್ನು ಗೆಲ್ಲಿಸಿಕೊಡುವ ಮೂಲಕ ಭಾರೀ ಪ್ರಮಾಣದಲ್ಲಿ ಆಶೀರ್ವಾದ ಮಾಡಿದ್ದಾರೆ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದರು. ನಗರದಲ್ಲಿಂದು ಟಿವಿ9 ಕನ್ನಡ ವಾಹಿನಿಯ ಕೊಪ್ಪಳ ವರದಿಗಾರನೊಂದಿಗೆ ಮಾತಾಡಿದ ತಂಗಡಗಿ, ಮುಂದಿನ 10-15 ವರ್ಷಗಳ ಕಾಲ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬರೋದು ಸಾಧ್ಯವಿಲ್ಲ. ಕಾಂಗ್ರೆಸ್ ಸರ್ಕಾರ ಉರುಳಿಸುವ ಮಾತಿ ಹಾಗಿರಲಿ, ಜೆಡಿಎಸ್ ಮತ್ತು ಬಿಜೆಪಿ ಎರಡೂ ಪಕ್ಷಗಳು ರಾಜ್ಯದಲ್ಲಿ ನಿರ್ನಾಮಗೊಳ್ಳುವ ಸಾಧ್ಯತೆ ಇದೆ ಎಂದರು. ಸರ್ಕಾರದ ಕಾರ್ಯವೈಖರಿಯನ್ನು ಕೇವಲ ಜನ ಮಾತ್ರ ಇಷ್ಟಪಡುತ್ತಿಲ್ಲ, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಶಾಸಕರು ಸಹ ಮನಸೋತಿದ್ದು ಅವರಲ್ಲಿ ಹಲವಾರು ಜನ ಕಾಂಗ್ರೆಸ್ ಸೇರಲು ಹಾತೊರೆಯುತ್ತಿದ್ದಾರೆ ಎಂದು ತಂಗಡಗಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ