Assembly polls: ಹಾಸನ ವಿಧಾನಸಭಾ ಕ್ಷೇತ್ರದಿಂದ ಭವಾನಿ ರೇವಣ್ಣ ಜೆಡಿಎಸ್ ಅಭ್ಯರ್ಥಿ ಅಂತ ಅನಧಿಕೃತ ಘೋಷಣೆ?

ಅರುಣ್​ ಕುಮಾರ್​ ಬೆಳ್ಳಿ

Updated on: Mar 27, 2023 | 6:06 PM

ಹಾಸನ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಮಾಡಿದ ಅಭಿವೃದ್ಧಿ ಕಾರ್ಯಗಳ ವಿವರ ಇರುವ ಹೊತ್ತಿಗೆಯೊಂದನ್ನು ಪಕ್ಷದ ಜಿಲ್ಲಾ ಘಟಕ ಬಿಡುಗಡೆ ಮಾಡಿದ್ದು ಅದರಲ್ಲಿ ಜಿಲ್ಲೆಯ ಇತರ ನಾಯಕರ ಜೊತೆ ಭವಾನಿ ರೇವಣ್ಣ ಅವರ ಫೋಟೋ ಕೂಡ ಇದೆ.

ಹಾಸನ: ಹಾಸನ ವಿಧಾನಸಭಾ ಕ್ಷೇತ್ರಕ್ಕೆ ಭವಾನಿ ರೇವಣ್ಣ (Bhavani Revanna) ಅವರನ್ನೇ ಅಂತಿಮವಾಗಿ ಜೆಡಿಎಸ್ ಅಭ್ಯರ್ಥಿ ಅಂತ ತೀರ್ಮಾನಿಸಲಾಗಿದೆಯೇ? ಇಂಥದೊಂದು ಪ್ರಶ್ನೆ ಏಳೋದಿಕ್ಕೆ ಕಾರಣವಿದೆ ಮಾರಾಯ್ರೇ. ವಿಷಯವೇನೆಂದರೆ, ಹಾಸನ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಮಾಡಿದ ಅಭಿವೃದ್ಧಿ ಕಾರ್ಯಗಳ ವಿವರ ಇರುವ ಹೊತ್ತಿಗೆಯೊಂದನ್ನು ಪಕ್ಷದ ಜಿಲ್ಲಾ ಘಟಕ ಬಿಡುಗಡೆ ಮಾಡಿದ್ದು ಅದರಲ್ಲಿ ಜಿಲ್ಲೆಯ ಇತರ ನಾಯಕರ ಜೊತೆ ಭವಾನಿ ರೇವಣ್ಣ ಅವರ ಫೋಟೋ ಕೂಡ ಇದೆ. ಭವಾನಿ, ಒಬ್ಬ ಕಾರ್ಯಕರ್ತೆಯಾಗಿ (worker) ಅಥವಾ ಜಿಲ್ಲಾ ಪರಿಷತ್ ಸದಸ್ಯರಾಗಿ (ZP member) ಜಿಲ್ಲೆಯನ್ನು ಅಭಿವೃದ್ಧಿ ಮಾಡಿದ್ದಾರೆಯೇ ಅಥವಾ ಈಗ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದರೆ ಮುಂದೆ ಅಭಿವೃದ್ಧಿ ಮಾಡುತ್ತಾರೆಯೇ? ಪ್ರಶ್ನೆಗೆ ಹೆಚ್ ಡಿ ಕುಮಾರಸ್ವಾಮಿಯವರೇ ಉತ್ತರ ನೀಡಬೇಕು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.