ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ತಮ್ಮ ಕಾರ್ಯಕರ್ತರಿಗೆ ಧಮ್ಕಿ ಹಾಕಿದ ವಿಡಿಯೋ ಬಿಡುಗಡೆ ಮಾಡಿದ ಜೆಡಿಎಸ್ ನಾಯಕ ಜವರಾಯಿಗೌಡ

ಅರುಣ್​ ಕುಮಾರ್​ ಬೆಳ್ಳಿ

Updated on: Mar 23, 2023 | 5:10 PM

ಪೊಲೀಸರಿಗೆ ಯಾಕೆ ದೂರು ನೀಡಿಲ್ಲ ಅಂತ ಪತ್ರಕರ್ತರೊಬ್ಬರು ಕೇಳಿದರೆ, ಮೊದಲು ಪ್ರೆಸ್ ಮೀಟ್ ಮಾಡಿ ಆಮೇಲೆ ದೂರು ಸಲ್ಲಿಸುವ ಅಂದುಕೊಂಡಿದ್ದೇವೆ ಅಂತ ಜವರಾಯಿಗೌಡರು ಹೇಳುತ್ತಾರೆ.

ಬೆಂಗಳೂರು: ಯಶವಂತಪುರದ ಜೆಡಿಎಸ್ ಅಭ್ಯರ್ಥಿ ಜವರಾಯಿಗೌಡ (JDS candidate Javarayigowda) ತಮ್ಮ ಪ್ರತಿಸ್ಪರ್ಧಿಯಾಗಬಹುದಾದ ಸಹಕಾರ ಸಚಿವ ಎಸ್ ಟಿ ಸೋಮಶೇಖರ (ST Somashekhar) ವಿರುದ್ಧ ಗುರುತರವಾದ ಆರೋಪಗಳನ್ನು ಮಾಡಿದ್ದಾರೆ ಮತ್ತು ವಿಡಿಯೋಗಳ ಮೂಲಕ ತಮ್ಮ ಆರೋಪಗಳನ್ನು ಪುಷ್ಠೀಕರಿಸುತ್ತಿದ್ದಾರೆ. ಸಚಿವರು ಜೆಡಿಎಸ್ ಕಾರ್ಯಕರ್ತರಿಗೆ (JDS workers) ಧಮ್ಕಿ ಹಾಕಿದ್ದಾರೆ ಎಂದು ಹೇಳುವ ಜವರಾಯಿಗೌಡ, ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳಲ್ಲಿ ಹಣ ಕೊಳ್ಳೆ ಹೊಡೆದಿದ್ದಾರೆಂದು ಹೇಳುತ್ತಾರೆ. ಪೊಲೀಸರಿಗೆ ಯಾಕೆ ದೂರು ನೀಡಿಲ್ಲ ಅಂತ ಪತ್ರಕರ್ತರೊಬ್ಬರು ಕೇಳಿದರೆ, ಮೊದಲು ಪ್ರೆಸ್ ಮೀಟ್ ಮಾಡಿ ಆಮೇಲೆ ದೂರು ಸಲ್ಲಿಸುವ ಅಂದುಕೊಂಡಿದ್ದೇವೆ ಅಂತ ಗೌಡರು ಹೇಳುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Mar 23, 2023 05:09 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.