ಮುಡಾ ಹಗರಣ; ಚೆಂಡು ಈಗ ನ್ಯಾಯಾಲಯದ ಅಂಗಳದಲ್ಲಿದೆ: ಜಿಟಿ ದೇವೇಗೌಡ, ಶಾಸಕ

ಅರುಣ್​ ಕುಮಾರ್​ ಬೆಳ್ಳಿ

Updated on: Aug 19, 2024 | 1:01 PM

ಜೆಡಿಎಸ್ ಮತ್ತು ಬಿಜೆಪಿ ನಡುವೆ ಏರ್ಪಟ್ಟಿರುವ ಮೈತ್ರಿಯ ಬಗ್ಗೆ ಮಾತಾಡುವಾಗ ಶಾಸಕ ದೇವೇಗೌಡ ಸಂದಿಗ್ಧತೆ, ಅನಿಶ್ಚಿತತೆ ಪ್ರದರ್ಶಿಸಿದ್ದು ಅಚ್ಚರಿ ಮೂಡಿಸಿತು. ಅಸ್ಥಿರವಾದ ಧ್ವನಿಯಲ್ಲಿ ಅವರು ಎರಡು ಪಕ್ಷಗಳ ನಡುವಿನ ಮೈತ್ರಿ ಮುಂಬರುವ ಎಲ್ಲ ಚುನಾವಣೆಗಳಲ್ಲಿ ಮುಂದುವರಿಯಲಿದೆ ಎನ್ನುತ್ತಾರೆ!

ಮೈಸೂರು: ಹಿರಿಯ ಜೆಡಿಎಸ್ ನಾಯಕ ಮತ್ತು ಪಕ್ಷದ ಕೋರ್ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡ ಅವರು ಕುಟುಂಬ ಸಮೇತ ನಂಜನಗೂಡಿನಲ್ಲಿರುವ ಶ್ರೀಕಂಠೇಶ್ವರಸ್ವಾಮಿ ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ನಂತರ ದೇವಸ್ಥಾನದ ಮೆಟ್ಟಿಲುಗಳ ಮೇಲೆ ಕುಳಿತು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು ಶ್ರೀಕಂಠೇಶ್ವರಸ್ವಾಮಿಗೆ ಪೂಜೆ ಸಲ್ಲಿಸುವುದು ತಮ್ಮ ಪತ್ನಿಯ ಇಚ್ಛೆಯಾಗಿತ್ತು, ಹಾಗಾಗಿ ಇಲ್ಲಿಗೆ ಬಂದು ದೇವರಿಗೆ ಪೂಜೆ ಸಲ್ಲಿಸಿ ನಾಡಿನ ಸಮಗ್ರ ಜನತೆಗೆ ಒಳ್ಳೆಯದಾಗಲಿ, ರಾಜ್ಯದಲ್ಲಿ ಸುಖ ಶಾಂತಿ ನೆಮ್ಮದಿ ಮತ್ತು ಸಮೃದ್ಧಿ ನೆಲೆಗೊಂಡಿರಲಿ ಎಂದು ಪ್ರಾರ್ಥಿಸಿದ್ದಾಗಿ ಹೇಳಿದರು. ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಜೆಡಿಎಸ್ ನಾಯಕರು ನಡೆಸಿದ ಪಾದಯಾತ್ರೆ ಫಲ ನೀಡಿದೆ, ರಾಜ್ಯಪಾಲರು ತಮ್ಮ ಕೆಲಸ ಮಾಡಿದ್ದಾರೆ, ಈಗ ಚೆಂಡು ನ್ಯಾಯಾಲಯದ ಅಂಗಳದಲ್ಲಿದೆ ಎಂದು ದೇವೇಗೌಡ ಹೇಳಿದರು. ಮುಡಾ ಹಗರಣದ ಎಲ್ಲ ತೀರ್ಮಾನಗಳನ್ನು ಇನ್ನು ಮುಂದೆ ನ್ಯಾಯಾಲಯವೇ ತೆಗೆದುಕೊಳ್ಳುತ್ತದೆ ಎಂದು ಶಾಸಕ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  MUDA Scam: ಪತ್ರಿಕಾ ವರದಿಗಳು ನಿಜವಾಗಿದ್ದರೆ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ: ಜಿಟಿ ದೇವೇಗೌಡ

Published on: Aug 19, 2024 01:01 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.