SR Srinivas: ಇಂದು ಪಕ್ಷದಿಂದ ಅಧಿಕೃತವಾಗಿ ಹೊರಬೀಳಲಿದ್ದಾರೆ ಗುಬ್ಬಿ ಕ್ಷೇತ್ರದ ಜೆಡಿಎಸ್ ಶಾಸಕ ಎಸ್ ಆರ್ ಶ್ರೀನಿವಾಸ್

ಅರುಣ್​ ಕುಮಾರ್​ ಬೆಳ್ಳಿ

Updated on: Mar 27, 2023 | 10:10 AM

ತಮ್ಮ ಮತ್ತು ಹೆಚ್ ಡಿ ಕುಮಾರಸ್ವಾಮಿ ನಡುವಿನ ಸಂಬಂಧ ಅಣ್ಣತಮ್ಮಂದಿರಂತಿತ್ತು. ಸುಮಾರು ಒಂದೂವರೆ ವರ್ಷಗಳ ಹಿಂದೆ ಆ ಸಂಬಂಧಕ್ಕೆ ಯಾರೋ ಹುಳಿ ಹಿಂಡಿದರು ಅಂತ ಶ್ರೀನಿವಾಸ್ ಹೇಳಿದರು.

ತುಮಕೂರು: ಗುಬ್ಬಿ ಕ್ಷೇತ್ರದ (Gubbi constituency) ಜೆಡಿಎಸ್ ಶಾಸಕ ಎಸ್ ಆರ್ ಶ್ರೀನಿವಾಸ್ (SR Srinivas) ಇಂದು ಬೆಳಗ್ಗೆ 11 ಗಂಟೆಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವ ಮೂಲಕ ಅಧಿಕೃತವಾಗಿ ಪಕ್ಷದಿಂದ ಹೊರಬೀಳಲಿದ್ದಾರೆ. ಹೊರಬೀಳಲಿದ್ದರೋ ಅಥವಾ ಹೊರದೊಬ್ಬಲ್ಪಟ್ಟಿರುವರೋ ಅಂತ ಗುಬ್ಬಿ ಜನರೇ ಹೇಳಬೇಕು. ಯಾಕೆಂದರೆ, ರಾಜೀನಾಮೆ ಸಲ್ಲಿಸುವ ಮೊದಲು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಶ್ರೀನಿವಾಸ್ ತಮ್ಮ ಮತ್ತು ಹೆಚ್ ಡಿ ಕುಮಾರಸ್ವಾಮಿ (HD Kumaraswamy) ನಡುವಿನ ಸಂಬಂಧ ಅಣ್ಣತಮ್ಮಂದಿರಂತಿತ್ತು. ಸುಮಾರು ಒಂದೂವರೆ ವರ್ಷಗಳ ಹಿಂದೆ ಆ ಸಂಬಂಧಕ್ಕೆ ಯಾರೋ ಹುಳಿ ಹಿಂಡಿದರು ಅಂತ ಹೇಳಿದರು. ಆದರೆ ಸುಮಾರು ಎರಡು ದಶಕಗಳ ಕಾಲ ಪಕ್ಷಕ್ಕಾಗಿ ದುಡಿಯುವ ಅವಕಾಶ ನೀಡಿದ್ದಕ್ಕಾಗಿ ಪಕ್ಷದ ಪಿತಾಮಹ ಹೆಚ್ ಡಿ ದೇವೇಗೌಡರನ್ನು ಕೃತಜ್ಞತೆಯಿಂದ ನೆನೆದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.