ಸಿಎಂ, ಡಿಸಿಎಂ ಹೆಸರಿನಲ್ಲಿ JDS ಶಾಸಕನಿಂದ ಮಾದಪ್ಪನಿಗೆ ಪೂಜೆ: ವಿಡಿಯೋ ನೋಡಿ
ಹನೂರು ಜೆಡಿಎಸ್ ಶಾಸಕ ಮಂಜುನಾಥ್ ಅವರು 490 ಕೋಟಿ ರೂಪಾಯಿ ನೀರಾವರಿ ಯೋಜನೆಗೆ ಅನುಮೋದನೆ ದೊರೆತ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶವಕುಮಾರ್ ಹಾಗೂ ಸಚಿವರ ಹೆಸರಿನಲ್ಲಿ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಚಾಮರಾಜನಗರ, ಮಾರ್ಚ್ 08: ಬಜೆಟ್ನಲ್ಲಿ ಉಡುತೊರೆ ಜಲಾಶಯಕ್ಕೆ ನೀರು ತುಂಬಿಸುವ ಯೋಜನೆಗೆ 490 ಕೋಟಿ ರೂ. ನೀರಾವರಿ ಯೋಜನೆಗೆ ಅಸ್ತು ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಶಿವಕುಮಾರ್ ಹೆಸರಿನಲ್ಲಿ ಮಾದಪ್ಪನಿಗೆ JDS ಹನೂರು ಶಾಸಕ ಮಂಜುನಾಥ್ರಿಂದ ಪೂಜೆ ಸಲ್ಲಿಸಲಾಗಿದೆ. ಉಡುತೊರೆ ಜಲಾಶಯಕ್ಕೆ ನೀರು ತುಂಬಿಸಬೇಕೆಂದು ಒತ್ತಾಯ ಇತ್ತು. 490 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ಮಾಡಿಸುವುದಾಗಿ ಬಜೆಟ್ನಲ್ಲಿ ಅನುದಾನ ಘೋಷಿಸಲಾಗಿದೆ. ಹಾಗಾಗಿ ಸಿಎಂ, ಡಿಸಿಎಂ ಸೇರಿದಂತೆ ಸಚಿವರಾದ ಕೆ.ವೆಂಕಟೇಶ್, ಡಾ.ಹೆಚ್.ಸಿ.ಮಹದೇವಪ್ಪ ಹೆಸರಲ್ಲೂ ಪೂಜೆ ಮಾಡಿಸಲಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us
