ಕಾಂಗ್ರೆಸ್ ಸೇರುವಂತೆ ಜೆಡಿಎಸ್ ಪಕ್ಷದ ಶಾಸಕರ ಮೇಲೆ ಒತ್ತಡ ಹೇರಲಾಗುತ್ತಿದೆ, ಆದರೆ ಯಾರೂ ಪಕ್ಷ ಬಿಡೋದಿಲ್ಲ: ಸಮೃದ್ಧಿ ಮಂಜುನಾಥ್, ಜೆಡಿಎಸ್ ಶಾಸಕ

ಅರುಣ್​ ಕುಮಾರ್​ ಬೆಳ್ಳಿ

Updated on: Aug 24, 2023 | 10:40 AM

ತನ್ನ ಮೇಲೆ ದೆಹಲಿಗೆ ಬರುವಂತೆ ಒತ್ತಡ ಹೇರಲಾಗಿತ್ತು, ಆದರೆ ಅವರ ಆಹ್ವಾನವನ್ನು ತಿರಸ್ಕರಿಸಿದೆ ಎಂದು ಅವರು ಹೇಳಿದರು. ಜೆಡಿಎಸ್ ಪಕ್ಷದ 19 ಶಾಸಕರಲ್ಲಿ ಯಾರೂ ಕಾಂಗ್ರೆಸ್ ಸೇರುತ್ತಿಲ್ಲ, ಇಷ್ಟರಲ್ಲೇ ಎಲ್ಲ 19 ಶಾಸಕರನ್ನು ಒಂದೇ ವೇದಿಕೆ ಮೇಲೆ ಕೂರಿಸಿ ಒಂದು ಕಾರ್ಯಕ್ರಮದ ಮೂಲಕ ಒಗ್ಗಟ್ಟನ್ನು ಪ್ರದರ್ಶಿಸಲಾಗುವುದು ಎಂದು ಅವರು ಹೇಳಿದರು.

ಕೋಲಾರ: ಬಿಜೆಪಿ ಮತ್ತು ಜೆಡಿಎಸ್ ಶಾಸಕರನ್ನು ಪಕ್ಷಕ್ಕೆ ಸೆಳೆಯುವ ಪ್ರಯತ್ನಗಳನ್ನು ಕಾಂಗ್ರೆಸ್ ನಾಯಕರು ಮಾಡುತ್ತಿರುವ ಬಗ್ಗೆ ವದಂತಿಗಳು ಕೇಳಿಬರುತ್ತಿವೆ. ಜಿಲ್ಲೆಯ ಮುಳುಬಾಗಿಲು (Mulbagal) ಕ್ಷೇತ್ರದ ಜೆಡಿಎಸ್ ಶಾಸಕ ಸಮೃದ್ಧಿ ಮಂಜುನಾಥ್ (Samrudhi Manjunath) ಗುರುವಾರ ಬೆಳಗ್ಗೆ ನೀಡಿರುವ ಹೇಳಿಕೆ ವದಂತಿಗಳನ್ನು ಪುಷ್ಠೀಕರಿಸುತ್ತದೆ. ಟಿವಿ9 ಕನ್ನಡ ವಾಹಿನಿ ವರದಿಗಾರನೊಂದಿಗೆ ಮಾತಾಡಿರುವ ಮಂಜುನಾಥ್, ಲೋಕ ಸಭೆ ಚುನಾವಣೆಯಲ್ಲಿ (Lok Sabha polls) ಕನಿಷ್ಟ 20 ಸೀಟುಗಳನ್ನು ಕರ್ನಾಟಕದಿಂದ ಗೆಲ್ಲಲೇಬೇಕು ಅಂತ ಕಾಂಗ್ರೆಸ್ ಹೈಕಮಾಂಡ್ ರಾಜ್ಯದ ನಾಯಕರಿಗೆ ಅಣತಿ ನೀಡಿರುವುದರಿಂದ ಬೇರೆ ಪಕ್ಷಗಳ ಶಾಸಕರನನ್ನು ಸೆಳೆಯುವ ಪ್ರಯತ್ನ ಅವರು ಮಾಡುತ್ತಿದ್ದಾರೆ. ತನ್ನ ಮೇಲೆ ದೆಹಲಿಗೆ ಬರುವಂತೆ ಒತ್ತಡ ಹೇರಲಾಗಿತ್ತು, ಆದರೆ ಅವರ ಆಹ್ವಾನವನ್ನು ತಿರಸ್ಕರಿಸಿದೆ ಎಂದು ಅವರು ಹೇಳಿದರು. ಜೆಡಿಎಸ್ ಪಕ್ಷದ 19 ಶಾಸಕರಲ್ಲಿ ಯಾರೂ ಕಾಂಗ್ರೆಸ್ ಸೇರುತ್ತಿಲ್ಲ, ಇಷ್ಟರಲ್ಲೇ ಎಲ್ಲ 19 ಶಾಸಕರನ್ನು ಒಂದೇ ವೇದಿಕೆ ಮೇಲೆ ಕೂರಿಸಿ ಒಂದು ಕಾರ್ಯಕ್ರಮದ ಮೂಲಕ ಒಗ್ಗಟ್ಟನ್ನು ಪ್ರದರ್ಶಿಸಲಾಗುವುದು ಎಂದು ಅವರು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.