ಗೃಹಲಕ್ಷ್ಮಿ ಯೋಜನೆ ಹಣ ಚುನಾವಣೆ ಸಮಯದಲ್ಲಿ ಮಾತ್ರ ನೀಡುವ ಹಣ ಅಂತ ಪುನರ್ ನಾಮಕರಣ ಮಾಡಿ: ಸರವಣ

ಅರುಣ್​ ಕುಮಾರ್​ ಬೆಳ್ಳಿ

Updated on: Mar 20, 2025 | 11:47 AM

ಹೇಳಿದ ಸಮಯಕ್ಕೆ ಸರಿಯಾಗಿ ಹಣ ತಲುಪದಿದ್ದರೆ ಫಲಾನುಭವಿಗಳಿಗೆ ಬಹಳ ತೊಂದರೆಯಾಗುತ್ತದೆ, ಗೃಹಲಕ್ಷ್ಮಿ ಹಣ ಬರುತ್ತದೆ ಎಂಬ ನಿರೀಕ್ಷೆಯಲ್ಲೇ ಅವರು ಹತ್ತಾರು ಕಮಿಟ್ಮೆಂಟ್​ಗಳನ್ನು ಮಾಡಿಕೊಂಡಿರುತ್ತಾರೆ. ಅದು ಮಕ್ಕಳ ಶಾಲಾ ಫೀ ಆಗಿರಬಹುದು ಟ್ಯೂಷನ್ ಫೀ ಆಗಿರಬಹುದು ಅಥವಾ ಬೇರೆ ಏನಾದರೂ ಕಾರಣವಾಗಿರಬಹುದು, ಹಣ ಟೈಮಿಗೆ ಸರಿಯಾಗಿ ಸಿಗದಿದ್ದರೆ ಸಮಸ್ಯೆಯಾಗುತ್ತದೆ ಎಂದು ಸರವಣ ಹೇಳಿದರು.

ಬೆಂಗಳೂರು,  ಮಾರ್ಚ್ 20: ವಿಧಾನ ಸೌಧದ ಆವರಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಎಗ ಮಾತಾಡಿದ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಟಿಎ ಸರವಣ (TA Saravana) ಗೃಹಲಕ್ಷ್ಮಿ ಯೋಜನೆ ಅಡಿ ಸಿದ್ದರಾಮಯ್ಯ ಸರ್ಕಾರ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಹಣ ಟ್ರಾನ್ಸ್​​ಫರ್ ಮಾಡಲು ವಿಳಂಬ ಮಾಡುತ್ತಿರುವುದನ್ನು ಖಂಡಿಸಿದರು. ಸರ್ಕಾರ ಗೃಹಲಕ್ಷ್ಮಿ ಯೋಜನೆಯನ್ನು 6ತಿಂಗಳಿಗೊಮ್ಮೆ, ವರ್ಷಕ್ಕೊಮ್ಮೆ ಅಥವಾ ಚುನಾವಣಾ ಸಮಯದಲ್ಲಿ ಮಾತ್ರ ನೀಡುವ ಹಣದ ಯೋಜನೆ ಅಂತ ಪುನರ್ ನಾಮಕರಣ ಮಾಡಬೇಕೆಂದು ಸರವಣ ಗೇಲಿ ಮಾಡಿದರು.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಸಿಎಂ ಇಬ್ರಾಹಿಂ ಅಧಿಕಾರಕ್ಕಾಗಿ ಪಕ್ಷದಿಂದ ಪಕ್ಷಕ್ಕೆ ಅಲೆಯುವ ವ್ಯಕ್ತಿ, ಅದರೆ ಜೆಡಿಎಸ್ ನನ್ನ ರಕ್ತದಲ್ಲಿದೆ: ಟಿಎ ಸರವಣ, ಎಮ್ಮೆಲ್ಸಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.