Understanding between JDS and BJP? ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಹೀನಾಯ ಸೋಲಿಗೆ ಬಿಜೆಪಿಯೇ ಕಾರಣ: ಟಿಎ ಸರವಣ, ಎಮ್ ಎಲ್ ಸಿ
ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ನಡುವೆ ಒಪ್ಪಂದವೇರ್ಪುಡುವ ಸಾಧ್ಯತೆಯ ವದಂತಿಗಳು ಹಬ್ಬಿವೆ.
ಬೆಂಗಳೂರು: 2023 ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ (JDS) ಅನುಭವಿಸಿದ ಸೋಲಿಗೆ ಬಿಜೆಪಿಯೇ ನೇರ ಕಾರಣ ಎಂದು ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಟಿ ಎ ಸರವಣ (TA Saravana) ದೂರಿದರು. ಬೆಂಗಳೂರಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಸರವಣ, ಮುಂಬರುವ ಯಾವುದೇ ಚುನಾವಣೆಯಲ್ಲಿ ಜೆಡಿಎಸ್ ಯಾವ ಪಕ್ಷದೊಂದಿಗೂ ಒಳ ಒಪ್ಪಂದ ಮಾಡಿಕೊಳ್ಳುವುದದಿಲ್ಲ ಎಂದರು. ಪಕ್ಷದ ನಾಯಕರಾದ ಹೆಚ್ ಡಿ ದೇವೇಗೌಡ (HD Devegowda) ಮತ್ತು ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಯಾವತ್ತೂ ಒಳಒಪ್ಪಂದ ಮಾಡಿಕೊಂಡವರಲ್ಲ, ಅದೇನಿದ್ದರೂ ಬಹಿರಂಗವಾಗೇ ಮಾಡುತ್ತಾರೆ ಎಂದು ಅವರು ಹೇಳಿದರು. ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ನಡುವೆ ಒಪ್ಪಂದವೇರ್ಪುಡುವ ಸಾಧ್ಯತೆಯ ವದಂತಿಗಳು ಹಬ್ಬಿವೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
