Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿಕಾರಿಗಳ ತಪ್ಪಿಗೆ ಕನ್ನಡಪರ ಹೋರಾಟಗಾರರ ಕಾಲಿಗೆ ಬಿದ್ದ ತಹಶೀಲ್ದಾರ್

ಅಧಿಕಾರಿಗಳ ತಪ್ಪಿಗೆ ಕನ್ನಡಪರ ಹೋರಾಟಗಾರರ ಕಾಲಿಗೆ ಬಿದ್ದ ತಹಶೀಲ್ದಾರ್

TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Nov 03, 2023 | 3:34 PM

ತಹಶೀಲ್ದಾರ್ ಗಜಾನನ ಬಾಲೆ ಅವರು ಗೈರಾದ ಅಧಿಕಾರಿಗಳಿಗೆ ಕರೆ ಮಾಡಿ ತರಾಟೆಗೆ ತೆಗೆದುಕೊಂಡಿದ್ದಾರೆ. ಅಲ್ಲದೇ ಹೋರಾಟಗಾರರ ಬಳಿ ಕ್ಷಮಿಸಿಯಾಸಿದ್ದು, ಹೋರಾಟ ಕೈಬಿಡುವಂತೆ ಕಾಲಿಗೆ ಬಿದ್ದಿದ್ದಾರೆ. ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಕಲಬುರಗಿ, (ನವೆಂಬರ್ 03): ಮೊನ್ನೇ ನವೆಂಬರ್ 01ರಂದು ರಾಜ್ಯಾದ್ಯಂತ ರಾಜ್ಯೋತ್ಸವ ಆಚರಣೆ ಮಾಡಲಾಗಿದೆ. ಆದ್ರೆ, ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದಲ್ಲಿ ರಾಜ್ಯೋತ್ಸವ ಆಚರಣೆ ಕಾರ್ಯಕ್ರಮದಲ್ಲಿ ಕೆಲವು ಅಧಿಕಾರಿಗಳ ಗೈರು ಎದ್ದು ಕಂಡಿದ್ದು, ಇದು ಕನ್ನಡಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ. ಹೌದು…ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕೆಲವು ಅಧಿಕಾರಿಗಳು ಗೈರಾಗಿರುವುದನ್ನು ಪ್ರಶ್ನಿಸಿ ಕನ್ನಡ ಪರ ಸಂಘಟನೆಗಳ ಮುಖಂಡರು ಧರಣಿ ನಡೆಸಿದ್ದು, ತಹಶೀಲ್ದಾರ್ ಗಜಾನನ ಬಾಲೆ ಅವರು ಗೈರಾದ ಅಧಿಕಾರಿಗಳಿಗೆ ಕರೆ ಮಾಡಿ ತರಾಟೆಗೆ ತೆಗೆದುಕೊಂಡಿದ್ದಾರೆ. ಅಲ್ಲದೇ ಹೋರಾಟಗಾರರ ಬಳಿ ಕ್ಷಮಿಸಿಯಾಸಿದ್ದು, ಹೋರಾಟ ಕೈಬಿಡುವಂತೆ ಕಾಲಿಗೆ ಬಿದ್ದಿದ್ದಾರೆ. ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಮತ್ತಷ್ಟು ವಿಡಿಯೋ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ