AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸಿಸ್ಟೆಂಟ್ ಡೈರೆಕ್ಟರ್ ಮಗ ಈಗ ತಮಿಳುನಾಡಿನ ಸುಲ್ತಾನ್: ದಳಪತಿ ವಿಜಯ್ ಸಾಧನೆಗೆ ದೊಡ್ಡಗೌಡರ ಸಲಾಂ!

ಅಸಿಸ್ಟೆಂಟ್ ಡೈರೆಕ್ಟರ್ ಮಗ ಈಗ ತಮಿಳುನಾಡಿನ ಸುಲ್ತಾನ್: ದಳಪತಿ ವಿಜಯ್ ಸಾಧನೆಗೆ ದೊಡ್ಡಗೌಡರ ಸಲಾಂ!

ಅಕ್ಷಯ್​ ಪಲ್ಲಮಜಲು​​
|

Updated on: May 12, 2026 | 4:55 PM

Share

ತಮಿಳುನಾಡಿನಲ್ಲಿ ನಟ, ಟಿವಿಕೆ ನಾಯಕ ಜೋಸೆಫ್ ವಿಜಯ್ ಸಿಎಂ ಆಗಿ ಹೊರಹೊಮ್ಮಿದ ಸಾಧನೆಯನ್ನು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಶ್ಲಾಘಿಸಿದ್ದಾರೆ. ಸಾಂಪ್ರದಾಯಿಕ ದ್ರಾವಿಡ ಪಕ್ಷಗಳನ್ನು ಮೀರಿ ವಿಜಯ್ ಅಸಾಮಾನ್ಯ ಎತ್ತರಕ್ಕೆ ಏರಿದ್ದಾರೆ. ವಿಜಯ್ ಅವರೊಂದಿಗೆ ಕಾವೇರಿ ಸೇರಿದಂತೆ ಕರ್ನಾಟಕ-ತಮಿಳುನಾಡು ಸಮಸ್ಯೆಗಳನ್ನು ಬಗೆಹರಿಸುವ ಭರವಸೆಯನ್ನು ಗೌಡರು ವ್ಯಕ್ತಪಡಿಸಿದ್ದಾರೆ. ಇದು ತಮಿಳುನಾಡು ರಾಜಕೀಯದಲ್ಲಿ ಹೊಸ ಅಧ್ಯಾಯವನ್ನು ತೆರೆಯಲಿದೆ.

ಹಾಸನ, ಮೇ.12: ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಜಯ ಸಾಧಿಸಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿರುವ ನಟ, ಟಿವಿಕೆ (TVK) ನಾಯಕ ಜೋಸೆಫ್ ವಿಜಯ್ ಅವರ ಸಾಧನೆಯನ್ನು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಹಾಡಿ ಹೊಗಳಿದ್ದಾರೆ. ವಿಜಯ್ ಅವರು ತಮಿಳುನಾಡಿನ ಸಾಂಪ್ರದಾಯಿಕ ದ್ರಾವಿಡ ಪಕ್ಷಗಳಾದ ಡಿಎಂಕೆ ಮತ್ತು ಎಐಎಡಿಎಂಕೆಯನ್ನು ಮೀರಿಸಿ ಬೆಳೆದಿರುವುದು ಸಾಮಾನ್ಯ ಸುದಿಯೇನಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಕೆ.ಕಾಮರಾಜ್, ಎಂಜಿಆರ್, ಕರುಣಾನಿಧಿ ಮತ್ತು ಜಯಲಲಿತಾ ಅವರಂತಹ ಮಹಾನ್ ನಾಯಕರ ಪ್ರಭಾವವನ್ನು ಮೀರಿ ವಿಜಯ್ ಇಂದು ತಮಿಳುನಾಡಿನ ದೊಡ್ಡ ಶಕ್ತಿಯಾಗಿ ಹೊರಹೊಮ್ಮಿದ್ದಾರೆ. “ವಿಜಯ್ ಎಲ್ಲೇ ಹೋದರೂ 40 ರಿಂದ 50 ಲಕ್ಷ ಜನರು ಸೇರುತ್ತಾರೆ. ಒಬ್ಬ ಸಾಮಾನ್ಯ ಅಸಿಸ್ಟೆಂಟ್ ಡೈರೆಕ್ಟರ್ ಮಗ ಈ ಎತ್ತರಕ್ಕೆ ಬೆಳೆದಿರುವುದು ಅವರ ಕಠಿಣ ಪರಿಶ್ರಮಕ್ಕೆ ಸಾಕ್ಷಿ” ಎಂದು ಗೌಡರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. “ತಮಿಳುನಾಡು ಮತ್ತು ಕರ್ನಾಟಕದ ನಡುವೆ ಹಲವು ಸಮಸ್ಯೆಗಳಿವೆ (ಕಾವೇರಿ ವಿಚಾರ). ವಿಜಯ್ ಅವರೊಂದಿಗೆ ಕುಳಿತು ಮಾತನಾಡುವ ಮೂಲಕ ಆ ಸಮಸ್ಯೆಗಳನ್ನು ಬಗೆಹರಿಸುವ ಕಾಲ ಬರಬಹುದು” ಎಂದು ಅವರು ಆಶಾವಾದ ವ್ಯಕ್ತಪಡಿಸಿದರು. ತಮಿಳುನಾಡಿನಲ್ಲಿ ಕಾಂಗ್ರೆಸ್ ಪಕ್ಷವು ಡಿಎಂಕೆ ಬಿಟ್ಟು ಟಿವಿಕೆಗೆ ಬೆಂಬಲ ನೀಡಿದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, “ಟಿಕೆಟ್ ಹಂಚಿಕೆ ವೇಳೆ ಸ್ಟಾಲಿನ್ ಮತ್ತು ಕಾಂಗ್ರೆಸ್ ನಡುವೆ ವ್ಯತ್ಯಾಸ ಬಂದಿರಬಹುದು, ಅದು ಅವರ ವೈಯಕ್ತಿಕ ವಿಚಾರ. ಸ್ಟಾಲಿನ್ ಏನು ಮಾಡಿದರು ಎಂದು ಚರ್ಚಿಸುವುದರಲ್ಲಿ ಈಗ ಅರ್ಥವಿಲ್ಲ” ಎಂದರು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us