‘ಯುದ್ಧ ಬಂದಾಗ ಶಸ್ತ್ರಾಭ್ಯಾಸ ಮಾಡುವವನು ನಾನಲ್ಲ’; ಕೆ ಕಲ್ಯಾಣ್

Updated on: Jul 23, 2025 | 11:48 AM

ಸಂಗೀತ ಸಂಯೋಜಕ ಕೆ.ಕಲ್ಯಾಣ್ ಅವರು ಇತ್ತೀಚೆಗೆ ಒಂದು ಹೊಸ ಸಾಧನೆ ಮಾಡಿದ್ದಾರೆ. ಅವರು ಜೈಲಿನಲ್ಲಿರುವ ಕೈದಿಯಿಂದ ಹಾಡೊಂದನ್ನು ಹಾಡಿಸಿದ್ದಾರೆ. ಈ ವಿಚಾರ ಸಾಕಷ್ಟು ಅಚ್ಚರಿ ಮೂಡಿಸಿದೆ. ಈ ಬಗ್ಗೆ ಮಾತನಾಡುವಾಗ ಅವರು ಒಂದಷ್ಟು ವಿಷಯಗಳ ಬಗ್ಗೆ ಹೇಳಿಕೊಂಡಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.

ಸಂಗೀತ ಸಂಯೋಜಕ, ಗೀತ ಸಾಹಿತಿ ಕೆ. ಕಲ್ಯಾಣ್ (K Kalyan) ಅವರು ಸದಾ ಆ್ಯಕ್ಟೀವ್ ಆಗಿರುತ್ತಾರೆ. ಅವರು ಎಂದಿಗೂ ಆಫರ್​ಗಾಗಿ ಕಾದು ಕುಳಿತವರಲ್ಲವಂತೆ. ‘ನಾನು ಆಫರ್ ಬರುತ್ತದೆ ಎಂದು ಯಾವಾಗಲೂ ಕಾಯುತ್ತ ಕೂರುವುದಿಲ್ಲ. ನಾನು ಸದಾ ಆ್ಯಕ್ಟೀವ್ ಆಗಿರುತ್ತೇನೆ. ಆಫರ್ ಬಂದಾಗ ಒಪ್ಪಿ ಮಾಡುತ್ತೇನೆ. ನಾನು ಯುದ್ಧ ಬಂದಾಗ ಶಸ್ತ್ರಾಸ್ತ್ರಾಭ್ಯಾಸ ಮಾಡುವುದಿಲ್ಲ. ಅದಕ್ಕಾಗಿ ಸದಾ ಸಿದ್ಧನಾಗೇ ಇರುತ್ತೇನೆ’ ಎನ್ನುತ್ತಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us