ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್ ಶಾಸಕರ ಪೈಪೋಟಿ ನಡುವೆ ತನಗೆ ಮಂತ್ರಿಗಿರಿಯೇ ಬೇಡವೆಂದ ಕೆ.ಎನ್. ರಾಜಣ್ಣ!
ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರು ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅವಕಾಶ ಸಿಕ್ಕರೂ ತಮಗೆ ಸಚಿವ ಸ್ಥಾನ ಬೇಡವೆಂದು ಹೇಳಿದ್ದು, ಜನಪರ ಆಡಳಿತಕ್ಕೆ ಒತ್ತು ನೀಡಿದ್ದಾರೆ. ತಾನು ಎರಡು ವರ್ಷ ಮಂತ್ರಿ ಕೆಲಸವನ್ನು ಪ್ರಾಮಾಣಿಕವಾಗಿ ಮತ್ತು ದಕ್ಷತೆಯಿಂದ ಮಾಡಿದ್ದು, ಈಗ ಬೇರೆಯವರಿಗೂ ಅವಕಾಶ ಕೊಡಲಿ ಎಂದವರು ಹೇಳಿದ್ದಾರೆ.
ಬೆಂಗಳೂರು, ಜೂನ್ 30: ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್ ಶಾಸಕರು ಪೈಪೋಟಿ ನಡೆಸುತ್ತಿರುವ ನಡುವೆ ತನಗೆ ಮಂತ್ರಿ ಸ್ಥಾನ ಬೇಡ ಎಂದು ಕೆ.ಎನ್. ರಾಜಣ್ಣ ಹೇಳಿದ್ದಾರೆ. ಮಂತ್ರಿ ಸ್ಥಾನದ ಆಕಾಂಕ್ಷಿ ಅಂತ ನಾನು ಎಲ್ಲೂ ಹೇಳಿಲ್ಲ. ಹೀಗಾಗಿ ತನೆಗೆ ಕೊಟ್ಟರೂ ಸಚಿವ ಸ್ಥಾನ ಬೇಡ. ಇದರಲ್ಲಿ ವೈರಾಗ್ಯ ಅಂತೇನೂ ಇಲ್ಲ. ನಾನು ಎರಡು ವರ್ಷ ಮಂತ್ರಿ ಕೆಲಸವನ್ನು ಪ್ರಾಮಾಣಿಕವಾಗಿ ಮತ್ತು ದಕ್ಷತೆಯಿಂದ ಮಾಡಿದ್ದೀನಿ. ಅದಕ್ಕೆ ಬೇರೆಯವರಿಗೂ ಅವಕಾಶ ಕೊಡಲಿ ಎಂದವರು ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
