ಡಿಸಿಎಂ ಡಿ.ಕೆ. ಶಿವಕುಮಾರ್- ಮಾಜಿ ಸಚಿವ ಕೆ.ಎನ್. ರಾಜಣ್ಣ ಭೇಟಿ ರಹಸ್ಯ ಬಿಚ್ಚಿಟ್ಟ MLC ರಾಜೇಂದ್ರ
ಕರ್ನಾಟಕ ರಾಜಕೀಯದಲ್ಲಿ ಸದ್ದು ಮಾಡುತ್ತಿರುವ ಡಿ.ಕೆ. ಶಿವಕುಮಾರ್ ಮತ್ತು ಸಿಎಂ ಸಿದ್ದರಾಮಯ್ಯ ಆಪ್ತ ಕೆ.ಎನ್. ರಾಜಣ್ಣ ಭೇಟಿ ಕುರಿತು ಕೆ.ಎನ್. ರಾಜೇಂದ್ರ ಪ್ರತಿಕ್ರಿಯಿಸಿದ್ದಾರೆ. ಪಕ್ಷದ ಅಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿಗಳು ಪಕ್ಷದ ಸದಸ್ಯರನ್ನು ಭೇಟಿಯಾಗುವುದು ಸಹಜ. ಇದು ಯಾವುದೇ ವೈಯಕ್ತಿಕ ಭವಿಷ್ಯ ರೂಪಿಸುವ ಪ್ರಯತ್ನವಲ್ಲ, ಬದಲಿಗೆ ಪಕ್ಷದ ಒಗ್ಗಟ್ಟಿನ ಭಾಗ ಎಂದು ಹೇಳಿದ್ದಾರೆ.
ದೆಹಲಿ, ಡಿಸೆಂಬರ್ 23: ಕರ್ನಾಟಕ ರಾಜಕೀಯದಲ್ಲಿ ಚರ್ಚೆಗೆ ಕಾರಣವಾಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ಆಪ್ತ ಕೆ.ಎನ್. ರಾಜಣ್ಣ ಭೇಟಿ ಕುರಿತು ಕಾಂಗ್ರೆಸ್ ಎಂಎಲ್ಸಿ ಮತ್ತು ರಾಜಣ್ಣ ಪುತ್ರ ರಾಜೇಂದ್ರ ಪ್ರತಿಕ್ರಿಯಿಸಿದ್ದಾರೆ. ಪಕ್ಷದ ಅಧ್ಯಕ್ಷ ಹಾಗೂ ಡಿಸಿಎಂ ಆಗಿರುವ ಡಿ.ಕೆ. ಶಿವಕುಮಾರ್ ಪಕ್ಷದ ಸದಸ್ಯರಾದ ರಾಜಣ್ಣ ಅವರನ್ನು ಭೇಟಿಯಾಗುವುದು ಸಹಜ. ಯಾವುದೇ ಪ್ರಮುಖ ವಿಚಾರಗಳಿದ್ದಾಗ ಈ ರೀತಿಯ ಭೇಟಿಗಳು ನಡೆಯಬಹುದು. ಭೇಟಿ ವೇಳೆ ನಡೆದ ಚರ್ಚೆ ಬಗ್ಗೆ ತನಗೆ ಮಾಹಿತಿ ಇಲ್ಲ, ಏಕೆಂದರೆ ಇದು ಖಾಸಗಿ ಭೇಟಿ ಎಂದು ಅವರು ತಿಳಿಸಿದ್ದಾರೆ. ಸಿಎಂ ಬದಲಾವಣೆ ವಿಚಾರದಲ್ಲಿ ರಾಜಣ್ಣ ಅವರು ಸಿದ್ದರಾಮಯ್ಯನವರ ಪರ ಗಟ್ಟಿಯಾಗಿ ನಿಂತಿದ್ದಾರೆ. ತಮ್ಮ ಹಿಂದಿನ ಮಾತಿಗೆ ಬದ್ಧರಾಗಿರುವುದಾಗಿ ರಾಜಣ್ಣ ಹೇಳಿದ್ದಾರೆ. ಡಿ.ಕೆ. ಶಿವಕುಮಾರ್ ಅವರು ಸತೀಶ್ ಜಾರಕಿಹೊಳಿ ಮತ್ತು ಜಮೀರ್ ಅಹ್ಮದ್ ಅವರಂತಹ ಸಿದ್ದರಾಮಯ್ಯ ಆಪ್ತರನ್ನು ಭೇಟಿಯಾಗುವುದು ಪಕ್ಷದ ಅಧ್ಯಕ್ಷರಾಗಿ ಸಹಜವಾದ ಪ್ರಕ್ರಿಯೆ. ಇದು ವಿಶ್ವಾಸ ಗಳಿಸುವ ಪ್ರಯತ್ನದ ಭಾಗವಲ್ಲ, ಬದಲಾಗಿ ಸಾಮಾನ್ಯ ರಾಜಕೀಯ ಮಾತುಕತೆ ಎಂದು ರಾಜೇಂದ್ರ ಅಭಿಪ್ರಾಯಪಟ್ಟಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
ಸೌದೆ ಒಲೆ ಬಳಸುವ ಮುನ್ನ ಹುಷಾರ್: ಕ್ಯಾನ್ಸರ್ ಬರಬಹುದು ಎಂದ ಡಾಕ್ಟರ್ಸ್
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ
ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್ಗಾಗಿ ಹೈಕಮಾಂಡ್ ಮಟ್ಟದಲ್ಲಿ ಲಾಭಿ
ಬಿರು ಬೇಸಿಗೆಯಲ್ಲೂ ಕಾರವಾರದಲ್ಲಿ ಭರ್ಜರಿ ಆಲಿಕಲ್ಲು ಮಳೆ!
