AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆ. ಶಿವರಾಮ್​ ಇನ್ನಿಲ್ಲ: ಮಾವನ ನಿಧನದ ಬಳಿಕ ನಟ ಪ್ರದೀಪ್​ ಭಾವುಕ ಪ್ರತಿಕ್ರಿಯೆ

ಕೆ. ಶಿವರಾಮ್​ ಇನ್ನಿಲ್ಲ: ಮಾವನ ನಿಧನದ ಬಳಿಕ ನಟ ಪ್ರದೀಪ್​ ಭಾವುಕ ಪ್ರತಿಕ್ರಿಯೆ

ಮದನ್​ ಕುಮಾರ್​
|

Updated on: Feb 29, 2024 | 7:14 PM

Share

ಕೆ. ಶಿವರಾಮ್​ ಅವರ ನಿಧನದ ಬಳಿಕ ಅವರ ಅಳಿಯ, ನಟ ಪ್ರದೀಪ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಕಳೆದ 20 ದಿನಗಳಿಂದ ಆಸ್ಪತ್ರೆಯಲ್ಲಿದ್ದ ಶಿವರಾಮ್​ ಅವರು ಚಿಕಿತ್ಸೆಗೆ ಸ್ಪಂದಿಸದೇ ವಿಧಿವಶರಾಗಿದ್ದಾರೆ. ಶುಕ್ರವಾರ (ಮಾರ್ಚ್​ 1) ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. ಶಿವರಾಮ್​ ನಿಧನಕ್ಕೆ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ.

ಮಾಜಿ ಐಎಎಸ್​ ಅಧಿಕಾರಿ, ಸಿನಿಮಾ ನಟ ಕೆ. ಶಿವರಾಮ್​ (K Shivaram) ಅವರು ತೀವ್ರ ಅನಾರೋಗ್ಯದಿಂದ ಇಂದು (ಫೆಬ್ರವರಿ 29) ನಿಧನರಾಗಿದ್ದಾರೆ. ಅವರ ಅಗಲಿಕೆಗೆ ಅನೇಕರು ಕಂಬನಿ ಮಿಡಿದಿದ್ದಾರೆ. ಶಿವರಾಮ್​ ನಿಧನದ (K Shivaram Death) ಬಳಿಕ ಅವರ ಅಳಿಯ, ನಟ ಪ್ರದೀಪ್​ (Actor Pradeep) ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ವೇಳೆ ಅವರು ಭಾವುಕರಾಗಿದ್ದಾರೆ. ‘ನಮ್ಮ ಮಾವ ಸುಮಾರು 20 ದಿನಗಳಿಂದ ಆಸ್ಪತ್ರೆಯಲ್ಲಿ ಇದ್ದರು. ಇವತ್ತು ನಾಲ್ಕು ಸಂಜೆ 4.18ಕ್ಕೆ ಕೊನೆಯುಸಿರು ಎಳೆದಿದ್ದಾರೆ. ತುಂಬ ಬೇಸರ ಆಗುತ್ತಿದೆ. ಕರ್ನಾಟಕ ಕಂಡ ಪ್ರಮುಖ ವ್ಯಕ್ತಿಗಳಲ್ಲಿ ಅವರು ಕೂಡ ಒಬ್ಬರಾಗಿದ್ದರು. ಕನ್ನಡದಲ್ಲಿ ಮೊದಲ ಬಾರಿ ಐಎಎಸ್​ ಪಾಸ್​ ಆದ ವ್ಯಕ್ತಿ ಇಂದು ನಮ್ಮ ಜೊತೆ ಇಲ್ಲ ಎಂದು ಹೇಳಲು ಬೇಜಾರಾಗುತ್ತಿದೆ’ ಎಂದಿದ್ದಾರೆ ಪ್ರದೀಪ್​. 2017ರಲ್ಲಿ ಪ್ರದೀಪ್​ ನಟನೆಯ ‘ಟೈಗರ್​’ ಸಿನಿಮಾ ಬಿಡುಗಡೆ ಆಗಿತ್ತು. ಆ ಸಿನಿಮಾದಲ್ಲಿ ಕೆ. ಶಿವರಾಮ್​ ಅವರು ಒಂದು ಪಾತ್ರ ಮಾಡಿದ್ದರು. ಅದು ಅವರು ನಟಿಸಿದ ಕೊನೆಯ ಸಿನಿಮಾ. ಚಿತ್ರರಂಗದಲ್ಲಿ ಮತ್ತೆ ತೊಡಗಿಕೊಳ್ಳಬೇಕು ಎಂಬ ಹಂಬಲ ಅವರಿಗೆ ಇತ್ತು. ಆದರೆ ಇಂದು ಅವರು ನಿಧನರಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More