ದರ್ಶನ್​ ಮೇಲಿರುವ ಕೊಲೆ ಆರೋಪದ ಬಗ್ಗೆ ಆಪ್ತ ಗೆಳೆಯ ತರುಣ್​ ಸುಧೀರ್​ ಮೊದಲ ಮಾತು

Updated on: Jul 11, 2024 | 5:04 PM

ನಟ ದರ್ಶನ್​ ಅವರ ಜೊತೆ ಆಪ್ತ ಒಡನಾಟ ಹೊಂದಿರುವ ತರುಣ್​ ಸುಧೀರ್​ ಅವರು ಇದೇ ಮೊದಲ ಬಾರಿಗೆ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಹಲವು ವರ್ಷಗಳಿಂದ ದರ್ಶನ್​ ಮತ್ತು ತರುಣ್​ ಸುಧೀರ್​ ಕುಟುಂಬದ ನಡುವೆ ಆತ್ಮೀಯತೆ ಇದೆ. ಈಗ ದರ್ಶನ್​ ಅವರು ಕೊಲೆ ಆರೋಪದಲ್ಲಿ ಜೈಲು ಸೇರಿದ್ದು, ಆ ಕುರಿತು ತರುಣ್​ ಸುಧೀರ್​ ಭಾವುಕವಾಗಿ ಮಾತನಾಡಿದ್ದಾರೆ.

ದರ್ಶನ್​ ನಟನೆಯ ‘ರಾಬರ್ಟ್​’, ‘ಕಾಟೇರ’ ಸಿನಿಮಾಗಳಿಗೆ ನಿರ್ದೇಶನ ಮಾಡಿರುವ ತರುಣ್​ ಸುಧೀರ್​ ಅವರು ಈಗ ರೇಣುಕಾ ಸ್ವಾಮಿ ಕೊಲೆ ಕೇಸ್​ ಕುರಿತು ಪ್ರತಿಕ್ರಿಯಿಸಿದ್ದಾರೆ. ‘ಏನು ಹೇಳಬೇಕು ಎಂಬುದೇ ಗೊತ್ತಾಗುತ್ತಿಲ್ಲ. ಮನಸ್ಸಿಗೆ ನೋವಾಗಿದೆ. ರೇಣುಕಾ ಸ್ವಾಮಿ ಕುಟುಂಬದ ಬಗ್ಗೆಯೂ ನನಗೆ ಅಪಾರವಾದ ನೋವು ಇದೆ. ಈ ಘಟನೆ ಆಗಬಾರದಿತ್ತು. ಇಲ್ಲಿ ಕೂಡ ನಮ್ಮ ಕುಟುಂಬ ಇದೆ. ನಮ್ಮ ಅಣ್ಣನೇ ಆ ರೀತಿ ಮಾಡಿದ್ದರೆ ಏನು ನೋವು ಆಗುತ್ತೋ ಅದೇ ನೋವಲ್ಲಿ ನಾನು ಇದ್ದೇನೆ. ದರ್ಶನ್​ ಅವರದ್ದು ತಪ್ಪು ಇಲ್ಲ ಅಂತಲೇ ಹೊರಗೆ ಬರಬಹುದಲ್ಲ ಎಂಬ ನಂಬಿಕೆ ನನ್ನದು. ಅದನ್ನೂ ಮೀರಿ ಕಾನೂನು ಇದೆ. ತನಿಖೆ ಸರಿಯಾಗಿ ಆಗುತ್ತದೆ. ಹಾಗಾಗಿ ವೈಯಕ್ತಿಕವಾಗಿ ನಾನೂ ಏನೂ ಹೇಳೋಕೆ ಆಗಲ್ಲ. ದರ್ಶನ್​ ಅವರನ್ನು ನಂಬಿಕೊಂಡ ದೊಡ್ಡ ಕುಟುಂಬಕ್ಕೆ ಕೂಡ ನೋವು ಆಗಿದೆ’ ಎಂದು ತರುಣ್​ ಸುಧೀರ್​ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More