AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kaatera Press Meet: ದಿಢೀರ್​ ಸುದ್ದಿಗೋಷ್ಠಿ ಕರೆದ ದರ್ಶನ್​, ರಾಕ್​ಲೈನ್​; ಲೈವ್​ ನೋಡಿ

Kaatera Press Meet: ದಿಢೀರ್​ ಸುದ್ದಿಗೋಷ್ಠಿ ಕರೆದ ದರ್ಶನ್​, ರಾಕ್​ಲೈನ್​; ಲೈವ್​ ನೋಡಿ

ಮದನ್​ ಕುಮಾರ್​
|

Updated on: May 02, 2024 | 7:27 PM

Share

ಸಡನ್​ ಆಗಿ ‘ಕಾಟೇರ’ ಸಿನಿಮಾ ತಂಡದವರು ಸುದ್ದಿಗೋಷ್ಠಿ ನಡೆಸುತ್ತಿದ್ದಾರೆ. ನಿರ್ಮಾಪಕ ರಾಕ್​ಲೈನ್​ ವೆಂಕಟೇಶ್​, ‘ಚಾಲೆಂಜಿಂಗ್​ ಸ್ಟಾರ್​’ ದರ್ಶನ್​, ನಿರ್ದೇಶಕ ತರುಣ್​ ಸುಧೀರ್​, ಡೈಲಾಗ್​ ರೈಟರ್​ ಮಾಸ್ತಿ ಅವರು ‘ಕಾಟೇರ’ ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡಿದ್ದಾರೆ. ಸುದ್ದಿಗೋಷ್ಠಿಯ ಉದ್ದೇಶ ಏನು ಎಂಬುದನ್ನು ರಾಕ್​ಲೈನ್​ ವೆಂಕಟೇಶ್​ ವಿವರಿಸಿದ್ದಾರೆ. ಸುದ್ದಿಗೋಷ್ಠಿಯ ಲೈವ್​ ವಿಡಿಯೋ ಇಲ್ಲಿದೆ..

ಕಳೆದ ವರ್ಷ ಕೊನೆಯಲ್ಲಿ ಬಿಡುಗಡೆ ಆದ ‘ಕಾಟೇರ’ ಸಿನಿಮಾ (Kaatera Movie) ಸೂಪರ್​ ಹಿಟ್​ ಆಯಿತು. ಬಳಿಕ ಒಟಿಟಿಯಲ್ಲಿ ವೀಕ್ಷಣೆಗೆ ಲಭ್ಯವಾಗಿ ಕೂಡ ಜನಮನ ಸೆಳೆಯಿತು. ನಟ ದರ್ಶನ್​ (Darshan) ಅವರಿಗೆ ಈ ಸಿನಿಮಾದಿಂದ ದೊಡ್ಡ ಯಶಸ್ಸು ಸಿಕ್ಕಿತು. ದರ್ಶನ್​ ಅಭಿಮಾನಿಗಳು ‘ಕಾಟೇರ’ ಸಿನಿಮಾವನ್ನು ಮುಗಿಬಿದ್ದು ನೋಡಿದರು. ನಿರ್ಮಾಪಕ ರಾಕ್​ಲೈನ್​ ವೆಂಕಟೇಶ್​ ಅವರು ಈ ಚಿತ್ರಕ್ಕೆ ಬಂಡವಾಳ ಹೂಡಿದ್ದು, ಅವರು ಕೂಡ ಲಾಭ ಕಂಡರು. ಈಗ ದಿಢೀರ್​ ಆಗಿ ‘ಕಾಟೇರ’ ಚಿತ್ರತಂಡದವರು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ಕರೆದಿದ್ದಾರೆ. ನಟ ದರ್ಶನ್​, ನಿರ್ಮಾಪಕ ರಾಕ್​ಲೈನ್​ ವೆಂಕಟೇಶ್​ (Rockline Venkatesh), ನಿರ್ದೇಶಕ ತರುಣ್​ ಸುಧೀರ್​, ಸಂಭಾಷಣೆಕಾರ ಮಾಸ್ತಿ ಅವರು ಈ ಸುದ್ದಿಗೋಷ್ಠಿಯಲ್ಲಿ ಭಾಗಿ ಆಗಿದ್ದಾರೆ. ಅದರ ಲೈವ್​ ವಿಡಿಯೋ ಇಲ್ಲಿದೆ..

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More