ಕಬ್ಜ ಸಿನಿಮಾದ ಚಿತ್ರೀಕರಣದ ಸಂದರ್ಭ ಎದುರಾದ ಕಷ್ಟಗಳ ನೆನೆದು ಕಣ್ಣೀರು ಹಾಕಿದ ಆರ್.ಚಂದ್ರು

Updated on: Mar 19, 2023 | 9:58 PM

ಕಬ್ಜ ಸಿನಿಮಾ ಮೂಲಕ ದೊಡ್ಡ ಗೆಲುವನ್ನು ಆರ್.ಚಂದ್ರು ಸಾಧಿಸಿದ್ದಾರೆ. ಆ ಸಿನಿಮಾದ ಚಿತ್ರೀಕರಣದ ಸಂದರ್ಭದಲ್ಲಿ ತಾವು ಎದುರಿಸಿದ ಕಷ್ಟಗಳನ್ನು ನೆನೆದು ಚಂದ್ರು ಕಣ್ಣೀರು ಹಾಕಿದ್ದಾರೆ. ಅವರ ಕಷ್ಟದ ಕತೆ ಅವರಿಂದಲೇ ಕೇಳಿ.

ಕಬ್ಜ (Kabzaa) ಸಿನಿಮಾ ಮೂಲಕ ಆರ್.ಚಂದ್ರು (R Chandru) ದೊಡ್ಡ ಗೆಲುವು ಸಾಧಿಸಿದ್ದಾರೆ. ಚಂದ್ರು ಪಾಲಿಗೆ ಈ ಗೆಲುವು ಬಹಳ ಮಹತ್ವದ್ದು. ಈ ಗೆಲುವು ಅವರ ಪಟ್ಟ ಪರಿಶ್ರಮಕ್ಕೆ ಸಿಕ್ಕ ಪ್ರತಿಫಲ. ಅವರು ಎದುರಿಸಿದ ಅವಮಾನಗಳಿಗೆ ಕೊಟ್ಟ ದಿಟ್ಟ ಉತ್ತರ. ಹಾಗಾಗಿ ಸಹಜವಾಗಿಯೇ ಈ ಗೆಲುವು ಅವರನ್ನು ಭಾವುಕರನ್ನಾಗಿಸಿದೆ. ಸಿನಿಮಾದ ಗೆಲುವಿನ ಯಶಸ್ಸನ್ನು ಸಂಭ್ರಮಿಸಲು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿರುವ ಆರ್.ಚಂದ್ರು, ಚಿತ್ರೀಕರಣದ ಸಂದರ್ಭದಲ್ಲಿ ತಾವೆದುರಿಸಿದ ಕಷ್ಟಗಳ ನೆನೆದು ಕಣ್ಣೀರು ಹಾಕಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published on: Mar 19, 2023 09:54 PM
Follow Us
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More