AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kadalekai Parishe: ಪರಿಷೆಯಲ್ಲಿ ಪ್ಲ್ಯಾಸ್ಟಿಕ್ ಬಳಕೆ ಮಾಡಿದ್ರೆ ಜೋಕೆ; ಸಚಿವ ರಾಮಲಿಂಗಾ ರೆಡ್ಡಿ ಎಚ್ಚರಿಕೆ

Kadalekai Parishe: ಪರಿಷೆಯಲ್ಲಿ ಪ್ಲ್ಯಾಸ್ಟಿಕ್ ಬಳಕೆ ಮಾಡಿದ್ರೆ ಜೋಕೆ; ಸಚಿವ ರಾಮಲಿಂಗಾ ರೆಡ್ಡಿ ಎಚ್ಚರಿಕೆ

ಭಾವನಾ ಹೆಗಡೆ
|

Updated on: Nov 17, 2025 | 3:21 PM

Share

ಬೆಂಗಳೂರಿನ ಐತಿಹಾಸಿಕ ಕಡಲೆಕಾಯಿ ಪರಿಷೆಯು ಈ ವರ್ಷ ಹಲವು ವಿಶೇಷತೆಗಳೊಂದಿಗೆ ಜನರನ್ನು ಆಕರ್ಷಿಸುತ್ತಿದೆ.ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ರಾಮಲಿಂಗಾ ರೆಡ್ಡಿ, ಈ ಬಾರಿ ಆಯೋಜಕರು ಪ್ಲಾಸ್ಟಿಕ್-ರಹಿತ ಪರಿಷೆಗೆ ಒತ್ತು ನೀಡಿದ್ದು, ಪ್ಲಾಸ್ಟಿಕ್ ಬಳಸುವ ಅಂಗಡಿಗಳನ್ನು ಮುಚ್ಚತ್ತೇವೆಂದು ಎಚ್ಚರಿಕೆ ನೀಡಿದ್ದಾರೆ. ರೈತರು ಮತ್ತು ವ್ಯಾಪಾರಿಗಳಿಗೆ ಅನುಕೂಲವಾಗುವಂತೆ ಕಳೆದ ವರ್ಷದಂತೆ ಈ ವರ್ಷವೂ ತೆರಿಗೆ-ರಹಿತ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ.

ಬೆಂಗಳೂರು, ನವೆಂಬರ್ 17: ಬೆಂಗಳೂರಿನ ಐತಿಹಾಸಿಕ ಕಡಲೆಕಾಯಿ ಪರಿಷೆಯು ಈ ವರ್ಷ ಹಲವು ವಿಶೇಷತೆಗಳೊಂದಿಗೆ ಜನರನ್ನು ಆಕರ್ಷಿಸುತ್ತಿದೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ರಾಮಲಿಂಗಾ ರೆಡ್ಡಿ, ಈ ಬಾರಿ ಆಯೋಜಕರು ಪ್ಲಾಸ್ಟಿಕ್-ರಹಿತ ಪರಿಷೆಗೆ ಒತ್ತು ನೀಡಿದ್ದು, ಪ್ಲಾಸ್ಟಿಕ್ ಬಳಸುವ ಅಂಗಡಿಗಳನ್ನು ಮುಚ್ಚತ್ತೇವೆಂದು ಎಚ್ಚರಿಕೆ ನೀಡಿದ್ದಾರೆ. ರೈತರು ಮತ್ತು ವ್ಯಾಪಾರಿಗಳಿಗೆ ಅನುಕೂಲವಾಗುವಂತೆ ಕಳೆದ ವರ್ಷದಂತೆ ಈ ವರ್ಷವೂ ತೆರಿಗೆ-ರಹಿತ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಹಿಂದೆ ಎರಡು ದಿನಗಳ ಕಾಲ ನಡೆಯುತ್ತಿದ್ದ ಈ ಜಾತ್ರೆಯನ್ನು ಐದು ದಿನಗಳಿಗೆ ವಿಸ್ತರಿಸಲಾಗಿದ್ದು, ಒಟ್ಟಾರೆ ಏಳೆಂಟು ದಿನಗಳ ಕಾಲ ಸಾರ್ವಜನಿಕರು ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಕಳೆದ ವರ್ಷ ಸುಮಾರು 4-5 ಲಕ್ಷ ಜನರು ಭಾಗವಹಿಸಿದ್ದು, ಈ ಬಾರಿ 6-8 ಲಕ್ಷ ಜನರ ನಿರೀಕ್ಷೆ ಇದೆ. ಮುಂದಿನ ವರ್ಷ ಪರಿಷೆಯನ್ನು ಇನ್ನೂ ಹೆಚ್ಚು ಭವ್ಯವಾಗಿ ನಡೆಸುವುದಾಗಿ ರಾಮಲಿಂಗರೆಡ್ಡಿ ಅವರು ಭರವಸೆ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Bhavana Hegde
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More