Kalaburagi : ‘ಗೃಹಜ್ಯೋತಿ’ ಕಾರ್ಯಕ್ರಮಕ್ಕೆ ಬರೋರಿಗೆ ಭರ್ಜರಿ ಊಟ; ಏನೇನು ಸ್ಪೆಷಲ್​ ಗೊತ್ತಾ..?

| Updated By: ಕಿರಣ್ ಹನುಮಂತ್​ ಮಾದಾರ್

Updated on: Aug 05, 2023 | 2:06 PM

ಗೃಹಜ್ಯೋತಿ ಗ್ಯಾರಂಟಿ ಯೋಜನೆಗೆ ಇಂದು(ಆ.5)ಕಲಬುರಗಿ ನಗರದ ಎನ್.ವಿ ಮೈದಾನದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಸಿಎಂ ಸಿದ್ದರಾಮಯ್ಯ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಚಾಲನೆ ನೀಡಿದ್ದಾರೆ.

ಕಲಬುರಗಿ,ಆ.5: ಗೃಹಜ್ಯೋತಿ ಗ್ಯಾರಂಟಿ ಯೋಜನೆಗೆ ಇಂದು(ಆ.5)ಕಲಬುರಗಿ(kalaburagi) ನಗರದ ಎನ್.ವಿ ಮೈದಾನದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಸಿಎಂ ಸಿದ್ದರಾಮಯ್ಯ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಚಾಲನೆ ನೀಡಿದ್ದು. ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು. ಫಲಾವ್, ಮೋತಿ ಚೂರು ಲಡ್ಡು ಸೇರಿ ಇನ್ನಿತರ ವಿವಿಧ ಭಕ್ಷ್ಯಗಳನ್ನು ಸಿಬ್ಬಂದಿಗಳು ಬಡಿಸುತ್ತಿದ್ದಾರೆ, ಸುಮಾರು ಹದಿನೈದು ಸಾವಿರ ಜನರಿಗೆ ಊಟದ ವ್ಯವಸ್ಥೆ ಮಾಡಲಾಗಿದ್ದು, ಊಟಕ್ಕಾಗಿಯೇ ಐವತ್ತು ಕೌಂಟರ್ ಆರಂಭಿಸಲಾಗಿದೆ. ಈಗಾಗಲೇ ಜನರು ಊಟ ಸವಿಯುತ್ತಿದ್ದಾರೆ.

ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us on