ಮಕ್ಕಳನ್ನು ವಿಮಾನದಲ್ಲಿ ಪ್ರವಾಸಕ್ಕೆ ಕರೆದುಕೊಂಡು ಹೋದ ಸರ್ಕಾರಿ ಶಾಲೆಯ ಹೆಡ್​ ಮಾಸ್ಟರ್, ವಿಡಿಯೋ ವೈರಲ್​​

Edited By: ವಿವೇಕ ಬಿರಾದಾರ

Updated on: Jan 10, 2024 | 3:19 PM

ಮಹಾರಾಷ್ಟ್ರದ ಅಕ್ಕಲಕೋಟೆ ತಾಲೂಕಿನ ಮೈಂದರ್ಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರು ವಿದ್ಯಾರ್ಥಿಗಳನ್ನು ವಿಮಾನದಲ್ಲಿ ದೆಹಲಿಗೆ ಕರೆದುಕೊಂಡು ಹೋಗಿದ್ದಾರೆ. ವಿಡಿಯೋ ನೋಡಿ

ಕಲಬುರಗಿ, ಜನವರಿ 10: ಮಕ್ಕಳನ್ನು ಪ್ರವಾಸಕ್ಕೆ (Trip) ಬಸ್ಸು ಅಥವಾ ರೈಲಿನಲ್ಲಿ ಕರೆದುಕೊಂಡು ಹೋಗುವುದು ಸಾಮಾನ್ಯ. ಆದರೆ ಈ ಮುಖ್ಯೋಪಾಧ್ಯಾಯರು (Headmaster) ಮಕ್ಕಳನ್ನು ಪ್ರವಾಸಕ್ಕೆ ವಿಮಾನದಲ್ಲಿ (Airplane) ಕರೆದುಕೊಂಡು ಹೋಗಿದ್ದಾರೆ. ಮಹಾರಾಷ್ಟ್ರದ ಅಕ್ಕಲಕೋಟೆ ತಾಲೂಕಿನ ಮೈಂದರ್ಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ (Government School) ಮುಖ್ಯೋಪಾಧ್ಯಾಯರು ವಿದ್ಯಾರ್ಥಿಗಳನ್ನು ವಿಮಾನದಲ್ಲಿ ದೆಹಲಿಗೆ ಪ್ರವಾಸಕ್ಕೆಂದು ಕರೆದುಕೊಂಡು ಹೋಗಿದ್ದಾರೆ. ಮುಖ್ಯೋಪಾಧ್ಯಾಯ ಮಹಾಂತೇಶ್ವರ ಕಟ್ಟಿಮನಿ ಅವರು ವಿದ್ಯಾರ್ಥಿಗಳನ್ನು ಕರೆದುಕೊಂಡು ಕಲಬುರಗಿಯಿಂದ ಮುಂಬೈಗೆ ರೈಲಿನಲ್ಲಿ ಹೋಗಿದ್ದಾರೆ. ಮುಂಬೈನಿಂದ ದೆಹಲಿಗೆ ವಿಮಾನದಲ್ಲಿ ಹೋಗಿದ್ದಾರೆ. ಮುಖ್ಯೋಪಾಧ್ಯಾಯ ಮಹಾಂತೇಶ್ವರ ಕಟ್ಟಿಮನಿ ಮಕ್ಕಳಿಂದ ಅಲ್ಪ ಹಣ ಸಂಗ್ರಹಿಸಿ, ಉಳಿದ ಹಣವನ್ನು ತಮ್ಮ ಕೈಯಿಂದ ಹಾಕಿದ್ದಾರೆ. ದೆಹಲಿಯಲ್ಲಿ ಸಂಸತ್ ಭವನ, ಕೆಂಪುಕೋಟೆ, ರಾಷ್ಟ್ರಪತಿ ಭವನ, ಇಂಡಿಯಾ ಗೇಟ್ ನೋಡಿ ಶಾಲಾ ಮಕ್ಕಳು ಸಂಭ್ರಮಿಸಿದ್ದಾರೆ. ಇನ್ನು ವಿಮಾನ ಪ್ರಯಾಣದಿಂದ ಶಾಲಾ ಮಕ್ಕಳಿಗೆ ಸಂತಸವಾಗಿದೆ.

Published on: Jan 10, 2024 03:17 PM
Follow Us
Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More