AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ತಾಪುರದಲ್ಲಿ ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು

ಚಿತ್ತಾಪುರದಲ್ಲಿ ರಸ್ತೆ ಕಾಮಗಾರಿಗೆ ಕಮಿಷನ್: ಕಲಬುರಗಿ ಪಂಚಾಯತ್ ರಾಜ್ ಜೆಇ ಲಂಚಾವತಾರ ಬಯಲು

ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: ವಿವೇಕ ಬಿರಾದಾರ|

Updated on:Jul 09, 2025 | 4:19 PM

Share

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಗುಂಡಗುರ್ತಿಯಲ್ಲಿ ನಡೆದ ಸಿಸಿ ರಸ್ತೆ ಕಾಮಗಾರಿ ಬಿಲ್ ಪಾವತಿಗೆ ಪಂಚಾಯತ್ ರಾಜ್ ಇಂಜಿನಿಯರ್ ವಿಭಾಗದ ಜೂನಿಯರ್ ಇಂಜಿನಿಯರ್ 5% ಲಂಚಕ್ಕೆ ಬೇಡಿಕೆ ಇಟ್ಟಿರುವ ವಿಡಿಯೋ ಟಿವಿ9ಗೆ ಲಭ್ಯವಾಗಿದೆ. ಗುತ್ತಿಗೆದಾರರೊಂದಿಗಿನ ಈ ವ್ಯವಹಾರದ ವಿಡಿಯೋದಲ್ಲಿ ಪಿಡಿಒ ಕೂಡ 3% ಲಂಚಕ್ಕೆ ಬೇಡಿಕೆ ಇಟ್ಟಿರುವುದು ಕಂಡುಬಂದಿದೆ. ಈ ಘಟನೆ ಲಂಚದ ಪ್ರಮಾಣವನ್ನು ಎತ್ತಿ ತೋರಿಸುತ್ತದೆ.

ಕಲಬುರಗಿ, ಜುಲೈ 09: ಸಿಸಿ ರಸ್ತೆ ಕಾಮಗಾರಿ ಬಿಲ್ ಮಾಡಲು ಕಲಬುರಗಿ ಪಂಚಾಯತ್ ರಾಜ್ ಇಂಜಿನಿಯರ್ ವಿಭಾಗ (PER)ದ ಜೂನಿಯರ್ ಇಂಜಿನಿಯರ್​ 5 ಪರ್ಸೆಂಟ್​ ಲಂಚ ಬೇಡಿರುವ ವಿಡಿಯೋ ಟಿವಿ9ಗೆ ಲಭ್ಯವಾಗಿದೆ. ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಗುಂಡಗುರ್ತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಿಸಿ ರಸ್ತೆ ಕಾಮಗಾರಿ ನಡೆದಿತ್ತು. ಕಾಮಗಾರಿ ಬಿಲ್​ ಮಾಡಲು 5 ಪರ್ಸೆಂಟ್ ಲಂಚ ಕೇಳಿದ್ದಾರೆ. ಪಿಡಿಓ 3 ಪರ್ಸೆಂಟ್ ಕೇಳುತ್ತಾರೆ, ಅವರಿಗೂ ಕೊಡಬೇಕು ಎಂದು ಗುತ್ತಿಗೆದಾರರ ಜೊತೆ ನಡೆದ ಹಣಕಾಸು ವ್ಯಾವಹಾರದ ವಿಡಿಯೋ ನೋಡಿ.

ಲಂಚಕ್ಕೆ ಬೇಡಿಕೆ ಇಟ್ಟ ಜೆಇ ಶ್ರೀಪಾದ್ ಕುಲಕರ್ಣಿ ಮತ್ತು ಪಿಡಿಒ ಮಂಜುಶ್ರೀ ಅವರನ್ನು ಅಮಾನತು ಮಾಡಿ ಕಲಬುರಗಿ ಜಿ.ಪಂ. ಸಿಇಒ ಭಂವರ್​ ಸಿಂಗ್ ಮೀನಾ ಆದೇಶ ಹೊರಡಿಸಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಮೇರೆಗೆ ಅಮಾನತು ಮಾಡಲಾಗಿದೆ.

ಪ್ರಕರಣ ಸಂಬಂಧ ಸಚಿವ ಪ್ರಿಯಾಂಕ್​ ಖರ್ಗೆ ಮಾತನಾಡಿ, ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಬಂದಿದೆ. ಮಾಧ್ಯಮಗಳಲ್ಲೂ ಈ ಸುದ್ದಿ ಗಮನಿಸಿದ್ದೇನೆ. ಜೆಇ ಮತ್ತು ಪಿಡಿಓ ಇಬ್ಬರನ್ನೂ‌ ಅಮಾನತು ಮಾಡಿದ್ದೇವೆ. ನಮ್ಮದೇ ಇಲಾಖೆಯಲ್ಲಿ, ನಮ್ಮ‌ ಕ್ಷೇತ್ರದಲ್ಲಿ ಈ‌ ರೀತಿ ನಡೆಯುವುದು ಸರಿಯಲ್ಲ.  ದೂರು ಕೊಟ್ಟರೆ ಸ್ಪೆಷಲ್ ಅಡಿಟ್ ಸಹ ಮಾಡುತ್ತೇವೆ ಎಂದು ಹೇಳಿದರು.

Published on: Jul 09, 2025 02:34 PM

Follow Us
Dattatraya Patil
Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More