Chittapur RSS Pathsanchalan Live: ಚಿತ್ತಾಪುರದಲ್ಲಿ RSS ಪಥಸಂಚಲನ; ಲೈವ್​ ನೋಡಿ

Edited By:

Updated on: Nov 16, 2025 | 3:57 PM

ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಇಂದು ಆರ್​​ಎಸ್​ಎಸ್​​ ಪಥಸಂಚಲನ ನಡೆಯಿತು. ಬಜಾಜ್ ಕಲ್ಯಾಣ ಮಂಟಪದಿಂದ ಪಥಸಂಚಲನ ಶುರುವಾಗಿದೆ. ಕೇವಲ 300 ಗಣವೇಷಧಾರಿಗಳು ಮತ್ತು 50 ಬ್ಯಾಂಡ್ ವಾದಕರಿಗೆ ಅವಕಾಶ ನೀಡಲಾಗಿದೆ. ಸಂವಿಧಾನ ಗೆದ್ದಿದೆ, ನಾವು ಇಂದು ಪಥಸಂಚಲನ ಮಾಡುತ್ತಿದ್ದೇವೆ ಎಂದು ಗಣವೇಷಧಾರಿಗಳು ಸಂತಸ ವ್ಯಕ್ತಪಡಿಸಿದ್ದಾರೆ.

ಕಲಬುರಗಿ, ನವೆಂಬರ್​ 16: ರಾಜ್ಯದ ಬಹುತೇಕ ಕಡೆ ಆರ್​​​ಎಸ್​​ಎಸ್​​ ಪಥಸಂಚಲನಕ್ಕೆ ಅವಕಾಶ ಸಿಕ್ಕಿದ್ದರೂ ಸಚಿವ ಪ್ರಿಯಾಂಕ್ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ ಕಗ್ಗಂಟಾಗಿತ್ತು. ಇತ್ತೀಚೆಗೆ ಹೈಕೋರ್ಟ್ RSS ಪಥಸಂಚಲನಕ್ಕೆ ಕೊನೆಗೂ ಗ್ರೀನ್ ಸಿಗ್ನಲ್ ನೀಡಿತ್ತು. ಈ ಬೆನ್ನಲ್ಲೇ ಇಂದು ಚಿತ್ತಾಪುರದಲ್ಲಿ ಆರ್​​​ಎಸ್​​ಎಸ್ ಪಥಸಂಚಲನ ಆರಂಭವಾಗಿದೆ. ಗಣವೇಷಧಾರಿಗಳು ಖುಷಿಯಿಂದ ಪಥಸಂಚಲನದಲ್ಲಿ ಭಾಗಿಯಾಗಿದ್ದಾರೆ. ಸಂವಿಧಾನ ಗೆದ್ದಿದೆ, ನಾವು ಇಂದು ಪಥಸಂಚಲನ ಮಾಡುತ್ತಿದ್ದೇವೆ ಎಂದು ಗಣವೇಷಧಾರಿಗಳು ಸಂತಸ ವ್ಯಕ್ತಪಡಿಸಿದ್ದಾರೆ. ಚಿತ್ತಾಪುರದಲ್ಲಿ RSS ಪಥಸಂಚಲನದ ನೇರಪ್ರಸಾರ ಇಲ್ಲಿದೆ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Nov 16, 2025 03:53 PM
Follow Us
Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More