7 ದಿನದ ಕಂದಮ್ಮ, ಬಾಣಂತಿ ಹೆಂಡ್ತಿಯನ್ನು ಬಿಟ್ಟು ದೇಶ ಸೇವೆಗೆ ತೆರಳಿದ ಕಲಬುರಗಿ ಯೋಧ

Updated on: May 11, 2025 | 12:41 PM

ಹೆಂಡತಿ ಡೆಲಿವರಿಗಾಗಿ ರಜೆ ಮೇಲೆ ಬಂದಿದ್ದ ಕಲಬುರಗಿ ಮೂಲದ CRPF ಯೋಧ ಹಣಮಂತರಾಯ್ ಔಸೆ ಅವರು ವಾಪಸ್ ಸೇವೆಗೆ ತೆರಳುತ್ತಿದ್ದಾರೆ. ವಾರದ ಹಿಂದಷ್ಟೇ ಹಣಮಂತರಾಯ್ ಅವರ ಪತ್ನಿಗೆ ಗಂಡು ಮಗು ಜನನವಾಗಿದೆ. ರಜೆ ಅವಧಿಯಲ್ಲಿ ಕೇವಲ 15 ದಿನ ಕಳೆದಿದೆ. ಭಾರತೀಯ ಸೇನೆ ತುರ್ತು ಸೇವೆಗೆ ಆಗಮಿಸುವಂತೆ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ದೇಶ ಸೇವೆಗೆ ಯೋಧ ಮರಳಿದ್ದಾರೆ.

ಕಲಬುರಗಿ, (ಮೇ 11): ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿ ಮತ್ತೆ ಭಾರತದ ಮೇಲೆ ದಾಳಿ ನಡೆಸುತ್ತಿದೆ. ಈ ಸಂದರ್ಭದಲ್ಲಿ ಹೆಂಡತಿ ಡೆಲಿವರಿಗಾಗಿ ರಜೆ ಮೇಲೆ ಬಂದಿದ್ದ ಕಲಬುರಗಿ ಮೂಲದ CRPF ಯೋಧ ಹಣಮಂತರಾಯ್ ಔಸೆ ಅವರು ವಾಪಸ್ ಸೇವೆಗೆ ತೆರಳುತ್ತಿದ್ದಾರೆ. ವಾರದ ಹಿಂದಷ್ಟೇ ಹಣಮಂತರಾಯ್ ಅವರ ಪತ್ನಿಗೆ ಗಂಡು ಮಗು ಜನನವಾಗಿದೆ. ರಜೆ ಅವಧಿಯಲ್ಲಿ ಕೇವಲ 15 ದಿನ ಕಳೆದಿದೆ. ಭಾರತೀಯ ಸೇನೆ ತುರ್ತು ಸೇವೆಗೆ ಆಗಮಿಸುವಂತೆ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ದೇಶ ಸೇವೆಗೆ ಯೋಧ ಮರಳಿದ್ದಾರೆ. ಈ ವೇಳೆ ಮಾತನಾಡಿದ ಯೋಧ ಣಮಂತರಾಯ್, ನನಗೆ ಮಗು, ಮನೆ, ಕುಟುಂಬಕ್ಕಿಂತ ದೇಶ ಮುಖ್ಯ. ನಾನು ಸೇನೆಗೆ ಸೇರುವ ಮುನ್ನ ನನಗೆ ಇದೇ ವೇದವಾಕ್ಯ. ಹಾಗಾಗಿ ದೇಶ ಸೇವೆಗಾಗಿ ತೆರಳುತ್ತಿದ್ದೇನೆ ಎಂದಿದ್ದಾರೆ.

Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More