ಕಲಬುರಗಿ: ಕಾರ್ಮಿಕನ ಮೃತದೇಹವನ್ನು ಪ್ರಾಣಿ ತರಹ ಎಳೆದೊಯ್ದ ಸಿಮೆಂಟ್​ ಕಂಪನಿ ಸಿಬ್ಬಂದಿ

Edited By: ವಿವೇಕ ಬಿರಾದಾರ

Updated on: Feb 19, 2025 | 11:13 AM

ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಕೊಡ್ಲಾ ಗ್ರಾಮದ ಶ್ರೀ ಸಿಮೆಂಟ್ ಕಂಪನಿಯಲ್ಲಿ ಕರ್ತವ್ಯದಲ್ಲಿ ಇದ್ದ 35 ವರ್ಷದ ಚಂದನಸಿಂಗ್ ಎಂಬ ಕಾರ್ಮಿಕ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅವರ ಮೃತದೇಹವನ್ನು ಕಂಪನಿ ಸಿಬ್ಬಂದಿ ಅಮಾನವೀಯವಾಗಿ ಎಳೆದೊಯ್ದ ವಿಡಿಯೋ ವೈರಲ್ ಆಗಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆಯಿಂದ ಕಂಪನಿಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

ಕಲಬುರಗಿ, ಫೆಬ್ರವರಿ 19: ಕರ್ತವ್ಯನಿರತ ವೇಳೆ ಹೃದಯಾಘಾತದಿಂದ ಮೃತಪಟ್ಟ ಕಾರ್ಮಿಕನ ಮೃತದೇವನ್ನು ಶ್ರೀ ಸಿಮೆಂಟ್ ಕಂಪನಿ ಸಿಬ್ಬಂದಿ ಪ್ರಾಣಿ ತರಹ ಎಳೆದೊಯ್ದ ವಿಡಿಯೋ ವೈರಲ್​ ಆಗಿದೆ. ಮನಕಲಕುವ ಘಟನೆ ಕಲಬುರಗಿ (Kalaburagi) ಜಿಲ್ಲೆ ಸೇಡಂ ತಾಲೂಕಿನ ಕೊಡ್ಲಾ ಗ್ರಾಮದಲ್ಲಿನ ಶ್ರೀ ಸಿಮೆಂಟ್ ಕಂಪನಿಯಲ್ಲಿ ನಡೆದಿದೆ. ಬಿಹಾರ ಮೂಲದ ಚಂದನಸಿಂಗ್ (35) ಮೃತ ದುದೈವಿ. ಚಂದನಸಿಂಗ್ ಶ್ರೀ ಸಿಮೆಂಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಮಂಗಳವಾರ ಕರ್ತವ್ಯನಿರತ ವೇಳೆ ಲೋ ಬಿಪಿಯಾಗಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮೃತ ಕಾರ್ಮಿಕ ಚಂದನಸಿಂಗ್​ ತದೇಹವನ್ನು ಸಿಬ್ಬಂದಿ ದರದರನೇ ಎಳೆದುಕೊಂಡು ಹೋಗಿದ್ದಾರೆ. ಶ್ರೀ ಸಿಮೆಂಟ್ ಕಂಪನಿ ಆಡಳಿತ ಮಂಡಳಿ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೇಡಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವಿಡಿಯೋ ವೈರಲ್​ ಆಗುತ್ತಿದ್ದಂತೆ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಸೇಡಂ ಪೊಲೀಸರು, 6 ಮಂದಿ ಕಾರ್ಮಿಕರನ್ನು ಬಂಧಸಿದ್ದಾರೆ. ಆರೋಪಿಗಳಾದ ಹೈದರ್ ಅಲಿ, ರವಿಶಂಕರ್, ಹರಿಂದರ್ ನಿಶಾದ್, ಅಜಯ್, ರಮೇಶಚಂದ್ರ ಅಖಿಲೇಶ್‌ ಬಂಧಿತ ಆರೋಪಿಗಳು.  ಬಿಎನ್​ಎಸ್​ ಕಾಯ್ದೆಯ 129(ಇ) ಮತ್ತು 129(ಡಿ) ಅಡಿ ಕೇಸ್ ದಾಖಲಾಗಿದೆ. ಬಂಧಿತ 6 ಮಂದಿ ಕಾರ್ಮಿಕರನ್ನು ಪೊಲೀಸರು ನ್ಯಾಯಾಂಗ ಬಂಧನಕ್ಕೆ ‌ಒಪ್ಪಿಸಿದ್ದಾರೆ.

Published on: Feb 19, 2025 07:41 AM
Follow Us
Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More