Kalaburagi: ಜನನಿಬಿಡ ಸೂಪರ್ ಮಾರ್ಕೆಟ್ ಪ್ರದೇಶದಲ್ಲಿ ಉರುಳಿಬಿದ್ದ ಮರ, ದ್ವಿಚಕ್ರ ವಾಹನಗಳು ಜಖಂ

ಅರುಣ್​ ಕುಮಾರ್​ ಬೆಳ್ಳಿ

Updated on: Mar 02, 2023 | 10:41 AM

ವಸಂತ ಋತುವಿನ ಕಾರಣ ಮರದ ಎಲೆಗಳೆಲ್ಲ ಉದುರಿರುವುದರಿಂದ ಅದು ಬೋಳುಬೋಳಾಗಿ ಕಾಣುತ್ತಿದೆ. ಆದರೆ ಜನನಿಬಿಡ ಪ್ರದೇಶದಲ್ಲಿ ಮರವೊಂದು ಉರುಳಿದ್ದು ಜನರಲ್ಲಿ ಆತಂಕವನ್ನುಂಟು ಮಾಡಿದೆ.

ಕಲಬುರಗಿ: ಮಳೆಯಿಲ್ಲ, ಜೋರು ಗಾಳಿಯಿಲ್ಲ ಆದರೆ ನಗರದ ಸೂಪರ್ ಮಾರ್ಕೆಟ್ (super market) ಪ್ರದೇಶದಲ್ಲಿ ಮರವೊಂದು ಕಳೆದ ರಾತ್ರಿ ಉರುಳಿ ಬಿದ್ದಿದೆ. ಮರದ ಕೆಳಗೆ ಬೈಕ್ ಗಳನ್ನು ಪಾರ್ಕ್ ಮಾಡಿದ್ದರಿಂದ ಸುಮಾರು 10 ದ್ವಿಚಕ್ರವಾಹನಗಳು ಜಖಂಗೊಂಡಿವೆ. ಪಕ್ಕದಲ್ಲೇ ಇದ್ದ ವಿದ್ಯುತ್ ಕಂಬದ (electricity poll) ಮೇಲೂ ಉರುಳಿದ ಕಾರಣ ವಿದ್ಯುತ್ ಪೂರೈಕೆ ಪ್ರಭಾವಕ್ಕೊಳಗಾಗಿದೆ. ಅದೇ ಪ್ರದೇಶದಲ್ಲಿ ಸಾರ್ವಜನಿಕರು ಓಡಾಡುತ್ತಿದ್ದರಾದರೂ ಯಾರಿಗೂ ಅಪಾಯ ಸಂಭವಿಸಿಲ್ಲ. ವಸಂತ ಋತುವಿನ (spring season) ಕಾರಣ ಮರದ ಎಲೆಗಳೆಲ್ಲ ಉದುರಿರುವುದರಿಂದ ಅದು ಬೋಳುಬೋಳಾಗಿ ಕಾಣುತ್ತಿದೆ. ಆದರೆ ಜನನಿಬಿಡ ಪ್ರದೇಶದಲ್ಲಿ ಮರವೊಂದು ಉರುಳಿದ್ದು ಜನರಲ್ಲಿ ಆತಂಕವನ್ನುಂಟು ಮಾಡಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Mar 02, 2023 10:38 AM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.