ಟಿವಿ9 ಡಿಜಿಟಲ್​ ವರದಿ ಫಲಶ್ರುತಿ: ಕಲಬುರಗಿ ಸರ್ಕಾರಿ ಶಾಲೆಯಲ್ಲೇ ಮಕ್ಕಳಿಗೆ ಊಟ ಸಿದ್ಧ

Edited By:

Updated on: Dec 01, 2023 | 4:27 PM

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಒಂದು ಹೊತ್ತಿನ ಊಟಕ್ಕಾಗಿ ಅಲೆದಾಡುತ್ತಿದ್ದಾರೆ. ಆದರೆ ಟಿವಿ9 ಡಿಜಿಟಲ್​ನಲ್ಲಿ ವರದಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿದ್ದಾರೆ. ಕಲಬುರಗಿ ಡಿಡಿಪಿಐ ಸಕ್ರಪ್ಪೆಗೌಡ ಬಿರಾದರ್​ ಸೂಚನೆ ಮೇರೆಗೆ ಶಾಲೆಯಲ್ಲೇ ಬಿಸಿಯೂಟ ಸಿದ್ದಪಡಿಸಿದ್ದು, ಮಕ್ಕಳು ಊಟ ಮಾಡಿದ್ದಾರೆ.

ಕಲಬುರಗಿ, ಡಿಸೆಂಬರ್​ 01: ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆ (School) ಯಲ್ಲಿ ಬಿಸಿಯೂಟಕ್ಕಾಗಿ ಪ್ರತಿದಿನ 2 ಕಿಲೋ ಮೀಟರ್ ನಡೆದುಕೊಂಡೆ ಹೋಗಬೇಕಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವರ ತವರಲ್ಲಿ ಅಮಾನವೀಯ ಕಂಡು ಬಂದಿತ್ತು. ಆದರೆ ಟಿವಿ9 ಡಿಜಿಟಲ್​ನಲ್ಲಿ ವರದಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿದ್ದಾರೆ. ಕಲಬುರಗಿ ಡಿಡಿಪಿಐ ಸಕ್ರಪ್ಪೆಗೌಡ ಬಿರಾದರ್​ ಸೂಚನೆ ಮೇರೆಗೆ ಶಾಲೆಯಲ್ಲೇ ಬಿಸಿಯೂಟ ಸಿದ್ದಪಡಿಸಿದ್ದು, ಮಕ್ಕಳು ಊಟ ಮಾಡಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More