AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಬರೀಶ್ ಮೊಮ್ಮಗನಿಗೆ ಕಲಘಟಗಿ ತೊಟ್ಟಿಲು; ಮಾರ್ಚ್​ 14ರಂದು ನಾಮಕರಣಅಂಬರೀಶ್ ಮೊಮ್ಮಗನಿಗೆ ಕಲಘಟಗಿ ತೊಟ್ಟಿಲು; ಮಾರ್ಚ್​ 14ರಂದು ನಾಮಕರಣ

ಅಂಬರೀಶ್ ಮೊಮ್ಮಗನಿಗೆ ಕಲಘಟಗಿ ತೊಟ್ಟಿಲು; ಮಾರ್ಚ್​ 14ರಂದು ನಾಮಕರಣ

ಮದನ್​ ಕುಮಾರ್​
|

Updated on: Mar 02, 2025 | 9:07 PM

Share

ಚಿತ್ರಗಾರ ಕುಟುಂಬ‌ ಸುಮಾರು 4 ತಲೆಮಾರುಗಳಿಂದ ತೊಟ್ಟಿಲು ತಯಾರಿಕೆಯಲ್ಲಿ ತೊಡಗಿಕೊಂಡಿದೆ. ಕಲಾವಿದ ಶ್ರೀಧರ್ ಅವರು ರೆಬಲ್ ಸ್ಟಾರ್ ಅಂಬರೀಷ್ ಅವರ ಮೊಮ್ಮಗನಿಗಾಗಿ ವಿಶಿಷ್ಟವಾದ ಈ ತೊಟ್ಟಿಲು ತಯಾರಿಸಿದ್ದಾರೆ. ತೊಟ್ಟಿಲಲ್ಲಿ ಕೃಷ್ಣನ ಅವತಾರ, ದಶಾವತಾರದ ಚಿತ್ರ ಬಿಡಿಸಿದ್ದಾರೆ. ರಾಜ್​ಕುಮಾರ್ ಮನೆಗೂ ಕಲಘಟಗಿ ತೊಟ್ಟಿಲು ಹೋಗಿತ್ತು.

ಅಭಿಷೇಕ ಅಂಬರೀಶ್ ಪುತ್ರನ ನಾಮಕರಣಕ್ಕೆ ಕಲಘಟಗಿಯಲ್ಲಿ ತೊಟ್ಟಿಲು ತಯಾರಾಗಿದೆ. ಧಾರವಾಡ ಜಿಲ್ಲೆಯ ಕಲಘಟಗಿಯ ಚಿತ್ರಗಾರ ಕುಟುಂಬದಿಂದ ತೊಟ್ಟಿಲು ನಿರ್ಮಾಣ ಮಾಡಲಾಗಿದೆ.ಕಲಾವಿದ ಶ್ರೀಧರ್ ಸೌಕಾರ್ ಅವರು ಕಳೆದ ಎರಡು ತಿಂಗಳಿಂದ ತೊಟ್ಟಿಲಿನ ಕೆಲಸ ಮಾಡುತ್ತಿದ್ದಾರೆ. ಮಾರ್ಚ್​ 14ರಂದು ಅಂಬಿ ಮೊಮ್ಮಗನ ನಾಮಕರಣ ಸಮಾರಂಭ ನಡೆಯಲಿದೆ. ಈ ಮೊದಲು ಇದೇ ಚಿತ್ರಗಾರ ಮನೆಯಿಂದ ಯಶ್ ಮನೆಗೆ ತೊಟ್ಟಿಲು ಹೋಗಿತ್ತು. ಅಂಬರೀಶ್ (Ambareesh) ಆಸೆಯಂತೆ ಕಲಘಟಗಿಯಲ್ಲಿ ತೊಟ್ಟಿಲು ತಯಾರಿಸಲಾಗಿತ್ತು. ಈಗ ಅಂಬರೀಷ ಮೊಮ್ಮಗನ ನಾಮಕರಣಕ್ಕೂ ಕಲಘಟಗಿಯಿಂದ ತೊಟ್ಟಿಲು ಬರುತ್ತಿದೆ.

​ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More