AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವ್ಯಾನಿಟಿ ಬ್ಯಾಗ್​ನಲ್ಲಿ ಚೂರಿ ಇರಲಿ: ಹಿಂದೂಗಳು ತಲ್ವಾರ್ ತೋರಿಸಿದ್ರೆ ಪಹಲ್ಗಾಮ್ ಕಥೆಯೇ ಬೇರೆಯಾಗ್ತಿತ್ತು ಎಂದ ಪ್ರಭಾಕರ ಭಟ್

ವ್ಯಾನಿಟಿ ಬ್ಯಾಗ್​ನಲ್ಲಿ ಚೂರಿ ಇರಲಿ: ಹಿಂದೂಗಳು ತಲ್ವಾರ್ ತೋರಿಸಿದ್ರೆ ಪಹಲ್ಗಾಮ್ ಕಥೆಯೇ ಬೇರೆಯಾಗ್ತಿತ್ತು ಎಂದ ಪ್ರಭಾಕರ ಭಟ್

ಅಶೋಕ್​ ಪೂಜಾರಿ, ಮಂಗಳೂರು
| Updated By: Ganapathi Sharma|

Updated on: Apr 29, 2025 | 11:30 AM

Share

ಕಲ್ಲಡ್ಕ ಪ್ರಭಾಕರ ಭಟ್: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಉಗ್ರ ದಾಳಿ ವಿಚಾರವಾಗಿ ಮಾತನಾಡಿದ ಆರ್​ಎಸ್​ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್, ಹಿಂದೂಗಳು ಕೇವಲ ತಲ್ವಾರ್ ತೋರಿಸಿದ್ದರೆ ಕಥೆಯೇ ಬೇರೆ ಇರುತ್ತಿತ್ತು ಎಂದಿದ್ದಾರೆ. ಹಿಂದೆಲ್ಲ ಹಿಂದೂಗಳು ದಾಳಿಯಾದಾಗ ಓಡಿ ಹೋಗುತ್ತಿದ್ದರು. ಆದರೆ, ಈಗ ಹಾಗಲ್ಲ. ತಿರುಗಿ ನಿಲ್ಲುತ್ತಿದ್ದಾರೆ, ನಿಲ್ಲಬೇಕು ಎಂದು ಅವರು ಕರೆ ನೀಡಿದರು.

ಮಂಗಳೂರು, ಏಪ್ರಿಲ್ 29: ಪಹಲ್ಗಾಮ್ ದಾಳಿ ವೇಳೆ ಉಗ್ರರಿಗೆ ಹಿಂದೂಗಳು ಕೇವಲ ತಲ್ವಾರ್ ತೋರಿಸಿದ್ದರೆ ಸಾಕಿತ್ತು, ಕಥೆಯೇ ಬೇರೆಯಾಗುತ್ತಿತ್ತು ಎಂದು ಆರ್​ಎಸ್​ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಹೇಳಿದ್ದಾರೆ. ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ವರ್ಕಾಡಿಯಲ್ಲಿ ಮಾತನಾಡಿದ ಅವರು, ಹೆಣ್ಣುಮಕ್ಕಳು ವ್ಯಾನಿಟಿ ಬ್ಯಾಗ್​​ನಲ್ಲಿ ಚೂರಿ ಇಟ್ಟುಕೊಳ್ಳಿ ಎಂದು ಕರೆ ನೀಡಿದರು. ಹೆಣ್ಣುಮಕ್ಕಳು ವ್ಯಾನಿಟಿ ಬ್ಯಾಗ್​​ನಲ್ಲಿ ಪೌಡರ್, ಬಾಚಣಿಗೆ ಜೊತೆಗೆ ಚಾಕು ಇಟ್ಟುಕೊಳ್ಳಿ. 6 ಇಂಚಿನ ಚೂರಿ ಇಟ್ಟುಕೊಳ್ಳಲು ಯಾವುದೇ ಲೈಸೆನ್ಸ್ ಬೇಡ. ಸಂಜೆ ಮೇಲೆ ಓಡಾಡಿದ್ರೆ ನಿಮ್ಮ ಮೇಲೆ ಖಂಡಿತಾ ಅಕ್ರಮಣ ಮಾಡುತ್ತಾರೆ. ಆಕ್ರಮಣ ಮಾಡಬೇಡಿ ಎಂದು ಬೇಡಿಕೊಂಡ್ರೆ ನಿಮ್ಮ ಕಥೆ ಮುಗಿಯಿತು. ಅದರ ಬದಲು ಚೂರಿ ತೋರಿಸಿ, ‘‘ಬಾ’’ ಎಂದು ಸವಾಲು ಹಾಕಿದರೆ ಸಾಕು ಹೆದರಿ ಓಡುತ್ತಾರೆ ಎಂದು ಅವರು ಹೇಳಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ