Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ದಸರಾ ಕ್ರೀಡಾಕೂಟದಲ್ಲಿ ಕಂಬಳ ಸ್ಪರ್ಧೆ: ಡಿಕೆ ಶಿವಕುಮಾರ್ ಘೋಷಣೆ

ಮೈಸೂರು ದಸರಾ ಕ್ರೀಡಾಕೂಟದಲ್ಲಿ ಕಂಬಳ ಸ್ಪರ್ಧೆ: ಡಿಕೆ ಶಿವಕುಮಾರ್ ಘೋಷಣೆ

ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: ಗಂಗಾಧರ​ ಬ. ಸಾಬೋಜಿ

Updated on: Apr 13, 2025 | 12:38 PM

ಮುಂದಿನ ವರ್ಷದಿಂದಲೇ ಮೈಸೂರು ದಸರಾ ಕ್ರೀಡಾಕೂಟದಲ್ಲಿ ಕಂಬಳ ಸ್ಪರ್ಧೆಯನ್ನು ಸೇರ್ಪಡೆಗೊಳಿಸುವುದಾಗಿ ಡಿಸಿಎಂ ಡಿಕೆ ಶಿವಕುಮಾರ್​ ಘೋಷಿಸಿದ್ದಾರೆ. ಮಂಗಳೂರಿನ ಗುರುಪುರ ಕಂಬಳದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಮತ್ತು ಮೈಸೂರು ಜಿಲ್ಲಾ ಸಚಿವರೊಂದಿಗೆ ಮಾತುಕತೆ ನಡೆಸಿ, 3 ಎಕರೆ ಜಾಗದಲ್ಲಿ ಶಾಶ್ವತ ಕಂಬಳ ಕೆರೆಯನ್ನು ನಿರ್ಮಿಸುವ ಯೋಜನೆಯನ್ನು ರೂಪಿಸುವುದಾಗಿ ತಿಳಿಸಿದ್ದಾರೆ.

ಮಂಗಳೂರು, ಏಪ್ರಿಲ್​ 13: ಮುಂದಿನ ವರ್ಷದಿಂದಲೇ ಮೈಸೂರು ದಸರಾ ಕ್ರೀಡಾಕೂಟದಲ್ಲಿ ಕಂಬಳ ಸ್ಪರ್ಧೆ ಆಯೋಜನೆ ಮಾಡುವುದಾಗಿ ಡಿಸಿಎಂ ಡಿಕೆ ಶಿವಕುಮಾರ್​ (DK Shivakumar) ಘೋಷಣೆ ಮಾಡಿದ್ದಾರೆ. ನಗರದ ಗುರುಪುರ ಕಂಬಳದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಸಿಎಂ, ಮೈಸೂರು ಜಿಲ್ಲಾ ಸಚಿವರ ಜೊತೆಗೆ ಮಾತುಕತೆ ನಡೆಸುತ್ತೇನೆ. ಇದಕ್ಕಾಗಿ ದಸರಾ ಕ್ರೀಡಾಕೂಟದಲ್ಲಿ ಪ್ರತಿವರ್ಷ ಕಂಬಳ ನಡೆಯಬೇಕು. 3 ಎಕರೆ ಜಾಗವನ್ನು ನಿಗದಿಪಡಿಸಿ ಶಾಶ್ವತ ಕಂಬಳ ಕೆರೆ ನಿರ್ಮಿಸಬೇಕು. ಇದಕ್ಕಾಗಿ ಅನುದಾನ ತೆಗೆದಿಡಲು ವ್ಯವಸ್ಥೆ ಮಾಡಿಸುತ್ತೇನೆ. ಕಂಬಳ ಅಂತಾರಾಷ್ಟ್ರೀಯ ಕ್ರೀಡೆಯಾಗಿ ಬೆಳೆಯಬೇಕು ಎಂದು ಹೇಳಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.