ರಾತ್ರಿ ಧೋ ಅಂತ ಸುರಿದ ಮಳೆಗೆ ಆನೇಕಲ್​ನ ಕಮ್ಮಸಂದ್ರ ಏರಿಯಾ ಜಲಾವೃತ, ನಿವಾಸಿಗಳಿಗೆ ಗೃಹಬಂಧನ!

ಮಾತೆತ್ತಿದರೆ ಬ್ರ್ಯಾಂಡ್ ಬೆಂಗಳೂರು, ನಗರವನ್ನು ಸಿಂಗಪೂರ್ ಮಾಡುತ್ತೇವೆ ಎನ್ನುವ ನಮ್ಮ ರಾಜಕಾರಣಿಗಳು ಅದರಲ್ಲೂ ವಿಶೇಷವಾಗಿ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿಕೆ ಶಿವಕುಮಾರ್ ಅಧಿಕಾರ ವಹಿಸಿಕೊಂಡ ಬಳಿಕ ಇದು ಎರಡನೇ ಮಳೆಗಾಲ. ಇನ್ಯಾವಾಗ ಅವರು ಕಾರ್ಯಪ್ರವೃತ್ತರಾಗಿ ನಗರದ ನಿವಾಸಿಗಳ ಮನಸ್ಸಿನಿಂದ ಮಳೆಗಾಲದ ಭೀತಿ ನಿವಾರಿಸುತ್ತಾರೋ?

ರಾತ್ರಿ ಧೋ ಅಂತ ಸುರಿದ ಮಳೆಗೆ ಆನೇಕಲ್​ನ ಕಮ್ಮಸಂದ್ರ ಏರಿಯಾ ಜಲಾವೃತ, ನಿವಾಸಿಗಳಿಗೆ ಗೃಹಬಂಧನ!
|

Updated on: Aug 12, 2024 | 12:16 PM

ಬೆಂಗಳೂರು: ಬೆಂಗಳೂರು ನಗರ ಮತ್ತು ಆನೇಕಲ್ ಪಟ್ಟಣ ಬೇರೆ ಬೇರೆಯೇನೂ ಅಲ್ಲ, ಅವೆರಡೂ ಜೊತೆಗೂಡಿವೆ, ಹಾಗಾಗಿ ಆನೇಕಲ್​ ಅನ್ನು ಬೆಂಗಳೂರು ನಗರದ ಭಾಗವೆಂದೇ ಪರಿಗಣಿಸಲಾಗುತ್ತದೆ. ಇದನ್ನು ಯಾಕೆ ಹೈಲೈಟ್ ಮಾಡಬೇಕಾಗಿದೆಯೆಂದರೆ, ನಿನ್ನೆ ರಾತ್ರಿ ಸುರಿದ ಮಳೆಯಿಂದ ಆನೇಕಲ್​ನ ಕಮ್ಮಸಂದ್ರ ಏರಿಯಾ ಸಂಪೂರ್ಣವಾಗಿ ಜಲಾವೃತಗೊಂಡಿದೆ. ಇಲ್ಲಿರುವ ಸುಂದರ ಮನೆಗಳನ್ನು ನೋಡಿ, ಅವುಗಳ ಸುತ್ತ ನೀರು! ಲಕ್ಷಾಂತರ ಹಣ ಖರ್ಚು ಮಾಡಿ ಮನೆ ಕಟ್ಟಿ ಪ್ರಯೋಜನವೇನು ಬಂತು? ನಿವಾಸಿಗಳು ತಮ್ಮ ತಮ್ಮ ಮನೆಗಳಿಂದ ಹೊರಬರುವಂತಿಲ್ಲ. ಇದು ಕಮ್ಮಸಂದ್ರ ಏರಿಯಾದ ಡ್ಯಾಡೀಸ್ ಗಾರ್ಡನ್ ಲೇಔಟ್ ಅಂತೆ, ಡ್ಯಾಡಿಗಳಿಗೆಲ್ಲ ಮಮ್ಮಿಗಳ ನೆನಪಾಗಿರಬಹುದು! ಕೋರ್ಟ್ ಕಚೇರಿಗಳಿಗೆ ಹೋಗುವ ಜನ ಅಗ್ನಿಶಾಮಕ ದಳದ ಸಿಬ್ಬಂದಿಯ ನೆರವಿನಿಂದ ಮನೆಯಿಂದ ಹೊರಬಿದ್ದು ಮುಖ್ಯ ರಸ್ತೆ ತಲುಪುತ್ತಿರುವುದನ್ನು ದೃಶ್ಯಗಳಲ್ಲಿ ನೋಡಬಹುದು. ಮಕ್ಕಳ ಶಾಲೆಗಳಿಗೆ ಅಘೋಷಿತ ರಜೆ. ಆದರೆ, ತ್ರೈಮಾಸಿಕ ಪರೀಕ್ಷೆಗಳಿರುವ ಮಕ್ಕಳು ಹೇಗಾದರೂ ಮಾಡಿ ಶಾಲೆ ತಲುಪಲೇಬೇಕು. ಅದೆಲ್ಲ ಸರಿ, ಬೆಂಗಳೂರು ನಗರ ಮಾನ್ಸೂನ್ ಸೀಸನಲ್ಲಿ ವಾಸಯೋಗ್ಯ ಆಗೋದು ಇನ್ಯಾವ ಕಾಲದಲ್ಲೋ?

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  Bengaluru Rain: ಬೆಂಗಳೂರು ಮಳೆ ನಿಂತರೂ ಅವಾಂತರ ನಿಂತಿಲ್ಲ, ಕರೆಯಂತಾದ ರಸ್ತೆಗಳು, ಹಲವೆಡೆ ಟ್ರಾಫಿಕ್

Follow us
ನಿರಪರಾಧಿ ಅಫ್ಜಲ್ ಗುರು ವಿರುದ್ಧ ಪೊಲೀಸರ ಸಂಚು; ಜೆಡಿಯು ನಾಯಕ ವಿವಾದ
ನಿರಪರಾಧಿ ಅಫ್ಜಲ್ ಗುರು ವಿರುದ್ಧ ಪೊಲೀಸರ ಸಂಚು; ಜೆಡಿಯು ನಾಯಕ ವಿವಾದ
ಸ್ಫೋಟಕ್ಕೆ ಉಗ್ರರ ಸಂಚು: ಕರ್ನಾಟಕ ಬಿಜೆಪಿ ಮುಖ್ಯ ಕಚೇರಿಗೆ ಭದ್ರತೆ ಹೆಚ್ಚಳ
ಸ್ಫೋಟಕ್ಕೆ ಉಗ್ರರ ಸಂಚು: ಕರ್ನಾಟಕ ಬಿಜೆಪಿ ಮುಖ್ಯ ಕಚೇರಿಗೆ ಭದ್ರತೆ ಹೆಚ್ಚಳ
ಧ್ರುವ ಸರ್ಜಾ ಮ್ಯಾನೇಜರ್​ ಬಂಧನದ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಕಮಿಷನರ್​
ಧ್ರುವ ಸರ್ಜಾ ಮ್ಯಾನೇಜರ್​ ಬಂಧನದ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಕಮಿಷನರ್​
ಮದ್ಯ ಸೇವಿಸಿ ಆಸ್ಪತ್ರೆಗೆ ಬಂದ ವೈದ್ಯ; ಕುಡಿದ ಮತ್ತಿನಲ್ಲಿ ಬಿದ್ದು ಹೊರಳಾಟ
ಮದ್ಯ ಸೇವಿಸಿ ಆಸ್ಪತ್ರೆಗೆ ಬಂದ ವೈದ್ಯ; ಕುಡಿದ ಮತ್ತಿನಲ್ಲಿ ಬಿದ್ದು ಹೊರಳಾಟ
ಗೃಹಲಕ್ಷ್ಮಿ ಯೋಜನೆಗೆ ನೀಡಲು ಸರ್ಕಾರದ ಬಳಿ ಹಣ ಇಲ್ವಾ?
ಗೃಹಲಕ್ಷ್ಮಿ ಯೋಜನೆಗೆ ನೀಡಲು ಸರ್ಕಾರದ ಬಳಿ ಹಣ ಇಲ್ವಾ?
ವಿವೋ ಹೊಸ ಸ್ಮಾರ್ಟ್​​ಫೋನ್ ಕ್ಯಾಮೆರಾದ ಫೋಟೊ ಕ್ಲಾರಿಟಿ ಸೂಪರ್ಬ್
ವಿವೋ ಹೊಸ ಸ್ಮಾರ್ಟ್​​ಫೋನ್ ಕ್ಯಾಮೆರಾದ ಫೋಟೊ ಕ್ಲಾರಿಟಿ ಸೂಪರ್ಬ್
ಮೈಸೂರು ದಸರಾ ಆನೆಗಳ ಮಾವುತ, ಕಾವಾಡಿಗರಿಗೆ ಹಾಟ್​​ ಬಾಕ್ಸ್​​ ಗಿಫ್ಟ್​​
ಮೈಸೂರು ದಸರಾ ಆನೆಗಳ ಮಾವುತ, ಕಾವಾಡಿಗರಿಗೆ ಹಾಟ್​​ ಬಾಕ್ಸ್​​ ಗಿಫ್ಟ್​​
ವಿದ್ಯಾರ್ಥಿಗಳ ಮುಂದೆ ಮಾದಕ ಮೈಮಾಟ ತೋರಿಸಿಕೊಂಡು ನೃತ್ಯ ಮಾಡಿದ ಶಿಕ್ಷಕಿ
ವಿದ್ಯಾರ್ಥಿಗಳ ಮುಂದೆ ಮಾದಕ ಮೈಮಾಟ ತೋರಿಸಿಕೊಂಡು ನೃತ್ಯ ಮಾಡಿದ ಶಿಕ್ಷಕಿ
‘ಚಾರ್ಜ್​ಶೀಟ್ ಸಾರ್ವಜನಿಕ ಡಾಕ್ಯುಮೆಂಟ್; ಜಿ. ಪರಮೇಶ್ವರ್
‘ಚಾರ್ಜ್​ಶೀಟ್ ಸಾರ್ವಜನಿಕ ಡಾಕ್ಯುಮೆಂಟ್; ಜಿ. ಪರಮೇಶ್ವರ್
ಗಣೇಶ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಇಬ್ಬರು ಯುವಕರು ಸಾವು
ಗಣೇಶ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಇಬ್ಬರು ಯುವಕರು ಸಾವು