ಕನಕಪುರ, ರಸ್ತೆಯಲ್ಲಿ ಬರುತ್ತಿದ್ದ ಕಾರಿಗೆ ಏಕಾಏಕಿ ಅಡ್ಡಬಂದ ಕಾಡಾನೆ: ವಿಡಿಯೋ ವೈರಲ್

Edited By:

Updated on: Jul 22, 2025 | 8:55 AM

ಇತ್ತೀಚೆಗೆ ರಾಮನಗರದಲ್ಲಿ ರೈತರ ಜಮೀನುಗಳಿಗೆ ಕಾಡಾನಗೆಳು ಲಗ್ಗೆ ಇಡುತ್ತಿರು ಪ್ರಕರಣಗಳು ಹೆಚ್ಚಾಗಿವೆ. ಕಾಡಾನೆ ಹಾವಳಿಗೆ ಕಡಿವಾಣ ಹಾಕುವಂತೆ ರೈತರು ಆಗ್ರಹಿಸಿದ್ದಾರೆ. ಇದೇ ಸಂದರ್ಭದಲ್ಲಿ, ಕಾಡಾನೆಯೊಂದು ರಸ್ತೆ ದಾಟುತ್ತಾ ಏಕಾಏಕಿ ಕಾರಿಗೆ ಅಡ್ಡಬಂದು ಎದುರುಬದುರಾದ ಘಟನೆ ನಡೆದಿದೆ. ವೈರಲ್ ವಿಡಿಯೋ ಇಲ್ಲಿದೆ ನೋಡಿ.

ರಾಮನಗರ, ಜುಲೈ 22: ರಾಮನಗರ ಜಿಲ್ಲೆಯಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿದ್ದು, ಕಾಡಿನಿಂದ ನಾಡಿಗೆ ಬಂದ ಗಜರಾಜ, ರಸ್ತೆಯಲ್ಲಿ ಬರುತ್ತಿದ್ದ ಕಾರಿಗೆ ಏಕಾಏಕಿ ಅಡ್ಡಬಂದಿದೆ. ಬೆಂಗಳೂರು ದಕ್ಷಿಣ ಜಿಲ್ಲೆ ಕನಕಪುರ ತಾಲೂಕಿನ ಕೊಳಗೊಂಡನಹಳ್ಳಿ ಗ್ರಾಮದ ಬಳಿ ಘಟನೆ ನಡೆದಿದ್ದು, ಭಯಾನಕ ಕ್ಷಣದ ವಿಡಿಯೋ ಈಗ ವೈರಲ್ ಆಗುತ್ತಿದೆ. ವಿಡಿಯೋ ಇಲ್ಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Jul 22, 2025 08:54 AM
Follow Us
Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More