ಭದ್ರತಾ ಸಿಬ್ಬಂದಿಯಿಂದ ಕಂಗನಾ ಕೆನ್ನೆಗೆ ಏಟು; ನಟಿಯ ಮೊದಲ ಪ್ರತಿಕ್ರಿಯೆ ಇಲ್ಲಿದೆ..

ಚಂಡಿಗಢ ವಿಮಾನ ನಿಲ್ದಾಣದಲ್ಲಿ ನಟಿ, ಸಂಸದೆ ಕಂಗನಾ ರಣಾವತ್​ ಅವರ ಕೆನ್ನೆಗೆ ಮಹಿಳಾ ಭದ್ರತಾ ಸಿಬ್ಬಂದಿ ಹೊಡೆದಿದ್ದಾರೆ. ಈ ಘಟನೆಯ ಬಳಿಕ ಕಂಗನಾ ಅವರು ಈ ವಿಡಿಯೋ ಮೂಲಕ ವಿವರ ನೀಡಿದ್ದಾರೆ. ಸಿಐಎಸ್​ಎಫ್​ ಭದ್ರತಾ ಸಿಬ್ಬಂದಿ ತಮಗೆ ಹೊಡೆದಿದ್ದಕ್ಕೆ ಕಾರಣ ಏನು ಎಂಬುದನ್ನು ಕಂಗನಾ ಅವರು ವಿವರಿಸಿದ್ದಾರೆ. ಆ ವಿಡಿಯೋ ಇಲ್ಲಿದೆ ನೋಡಿ..

ಭದ್ರತಾ ಸಿಬ್ಬಂದಿಯಿಂದ ಕಂಗನಾ ಕೆನ್ನೆಗೆ ಏಟು; ನಟಿಯ ಮೊದಲ ಪ್ರತಿಕ್ರಿಯೆ ಇಲ್ಲಿದೆ..
|

Updated on: Jun 06, 2024 | 8:39 PM

ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದ ಸಂಸದೆಯಾಗಿ ಆಯ್ಕೆ ಆಗಿರುವ ನಟಿ ಕಂಗನಾ ರಣಾವತ್​ (Kangana Ranaut) ಅವರ ಮೇಲೆ ಭದ್ರತಾ ಸಿಬ್ಬಂದಿ ಕೈ ಮಾಡಿದ್ದಾರೆ. ಚಂಡಿಗಢ ವಿಮಾನ ನಿಲ್ದಾಣದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕುಲ್ವಿಂದರ್​ ಕೌರ್​ ಎಂಬ ಮಹಿಳಾ ಕಾನ್ಸ್​ಟೇಬಲ್​ ಈ ಕೃತ್ಯ ಎಸಗಿದ್ದಾರೆ. ಕಂಗನಾ ರಣಾವತ್​ಗೆ ಕಪಾಳ ಮೋಕ್ಷ ಮಾಡಿರುವ ಘಟನೆಯಿಂದ ಎಲ್ಲರಿಗೂ ಶಾಕ್​ ಆಗಿದೆ. ಈ ಬಗ್ಗೆ ಕಂಗನಾ ಅವರು ವಿಡಿಯೋ (Kangana Ranaut Video) ಮೂಲಕ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ‘ನಮಸ್ತೆ ಸ್ನೇಹಿತರೇ.. ನನ್ನ ಹಿತೈಷಿಗಳು ಮತ್ತು ಮಾಧ್ಯಮದವರಿಂದ ಅನೇಕ ಫೋನ್​ ಕರೆಗಳು ಬರುತ್ತಿವೆ. ನಾನು ಸುರಕ್ಷಿತವಾಗಿದ್ದೇನೆ. ಚಂಡಿಗಢ ವಿಮಾನ ನಿಲ್ದಾಣದಲ್ಲಿ ಸೆಕ್ಯುರಿಟಿ ಚೆಕ್​ ವೇಳೆ ಈ ಘಟನೆ ನಡೆಯಿತು. ನಾನು ಸೆಕ್ಯುರಿಟಿ ಚೆಕ್​ ಮುಗಿಸಿ ಮುಂದೆ ತೆರಳುವಾಗಿ ಪಕ್ಕದ ಕ್ಯಾಬಿನ್​ನಲ್ಲಿ ಇದ್ದ ಸಿಐಎಸ್​ಎಫ್​ (CISF) ಭದ್ರತಾ ಸಿಬ್ಬಂದಿ ಬಂದು ನನ್ನ ಮುಖಕ್ಕೆ ಹೊಡೆದರು. ಅಲ್ಲದೇ ನನಗೆ ಬೈಯ್ಯಲು ಶುರು ಮಾಡಿದರು. ಯಾಕೆ ಹೀಗೆ ಮಾಡಿದ್ರಿ ಅಂತ ನಾನು ಅವರಿಗೆ ಕೇಳಿದೆ. ರೈತರ ಹೋರಾಟಕ್ಕೆ ತಾವು ಬೆಂಬಲ ನೀಡುವುದಾಗಿ ಅವರು ಹೇಳಿದರು. ನಾನು ಸುರಕ್ಷಿತವಾಗಿದ್ದೇನೆ. ಆದರೆ ಪಂಜಾಬ್​ನಲ್ಲಿ ಹೆಚ್ಚುತ್ತಿರುವ ಉಗ್ರವಾದ ಮತ್ತು ಆತಂಕವಾದವನ್ನು ನಾವು ಹೇಗೆ ನಿಭಾಯಿಸುವುದು ಎಂಬ ಬಗ್ಗೆ ನನ್ನ ಕಳಕಳಿ ಇರುವುದು. ಧನ್ಯವಾದ’ ಎಂದು ಕಂಗನಾ ರಣಾವತ್​ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್