ಡಿಕೆಶಿ ನಟ್ಟು ಬೋಲ್ಟು ಹೇಳಿಕೆ: ಕರ್ನಾಟಕಕ್ಕೆ ಬಂದು ತಿರುಗೇಟು ನೀಡಿದ ಕಂಗನಾ ರಣಾವತ್

Updated on: Mar 04, 2025 | 11:01 PM

ಚಿತ್ರರಂಗದ ಬಗ್ಗೆ ಡಿಕೆ ಶಿವಕುಮಾರ್ ಅವರು ಮಾತನಾಡಿದ್ದನ್ನು ನಟಿ ಕಂಗನಾ ರಣಾವತ್ ಕೂಡ ಖಂಡಿಸಿದ್ದಾರೆ. ಚಿತ್ರರಂಗದವರ ನಟ್ಟು ಬೋಲ್ಟು ಟೈಟ್ ಮಾಡುವುದು ತಮಗೆ ಗೊತ್ತು ಎಂದು ಡಿಕೆಶಿ ಹೇಳಿದ್ದರು. ಅದನ್ನು ಅನೇಕ ಸೆಲೆಬ್ರಿಟಿಗಳು ವಿರೋಧಿಸಿದ್ದಾರೆ. ಈಗ ಬಾಲಿವುಡ್ ನಟಿ ಕಂಗನಾ ಕೂಡ ಆ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.

‘ಕಲಾವಿದರ ಜೊತೆ ಯಾವಾಗಲೂ ದೇವರು ಇರುತ್ತಾನೆ. ಅವರ ನಟ್ಟು ಟೈಟ್ ಮಾಡಲು ಬಂದರೆ ಕಾಪಾಡಲು ದೇವರು ಬರುತ್ತಾನೆ’ ಎಂದು ಕಂಗನಾ ರಣಾವತ್ ಅವರು ಹೇಳಿದ್ದಾರೆ. ಕನ್ನಡ ಚಿತ್ರರಂಗದ ನಟ್ಟು ಬೋಲ್ಟು ಟೈಟ್ ಮಾಡುವುದಾಗಿ ಡಿಕೆ ಶಿವಕುಮಾರ್ ಹೇಳಿದ್ದರು. ಅವರ ಈ ಮಾತಿಗೆ ಕಂಗನಾ ರಣಾವತ್ ತಿರುಗೇಟು ನೀಡಿದ್ದಾರೆ. ಕರ್ನಾಟಕಕ್ಕೆ ಬಂದ ಕಂಗನಾ ಅವರು ತಮ್ಮ ಪ್ರತಿಕ್ರಿಯೆ ತಿಳಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More