ಕಾಪು ಮಾರಿಗುಡಿ ದೇವಸ್ಥಾನಕ್ಕೆ ಕಂಗನಾ ಭೇಟಿ; ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಭಾಗಿ

Updated on: Mar 03, 2025 | 11:03 PM

ಕಾಪು ಕ್ಷೇತ್ರದಲ್ಲಿ ಇರುವ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಬಾಲಿವುಡ್​ ನಟಿ, ಸಂಸದೆ ಕಂಗನಾ ರಣಾವತ್ ಅವರು ಭೇಟಿ ನೀಡಿದ್ದಾರೆ. ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಕಂಗನಾ ಭಾಗಿ ಆಗಿದ್ದಾರೆ. ಮಂಡಿ ಕ್ಷೇತ್ರದ ಸಂಸದೆ ಆಗಿರುವ ಕಂಗನಾ ರಣಾವತ್ ಅವರು ಮಾರಿಯಮ್ಮನ ದರ್ಶನದ ಪಡೆದ ನಂತರ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡರು.

ಮಾರ್ಚ್​ 03, ಉಡುಪಿ: ಕಾಪು ಕ್ಷೇತ್ರದಲ್ಲಿರುವ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಸಂಸದೆ, ಬಾಲಿವುಡ್​ ನಟಿ ಕಂಗನಾ ರಣಾವತ್  (Kangana Ranaut) ಭೇಟಿ ನೀಡಿದ್ದಾರೆ. ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಅವರು ಭಾಗಿಯಾಗಿದ್ದಾರೆ. ಮಂಡಿ ಕ್ಷೇತ್ರದ ಸಂಸದೆಯಾಗಿರುವ ಕಂಗನಾ ರಣಾವತ್ ಅವರು ಮಾರಿಯಮ್ಮ ದೇವಿಯ ದರ್ಶನದ ಬಳಿಕ ಸಾರ್ವಜನಿಕ ಸಭೆಯಲ್ಲಿ ಭಾಗಿಯಾದರು.

ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More