ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಹೃದಯಾಘಾತದಿಂದ ದಿಲೀಪ್ ರಾಜ್ ಅವರು ನಿಧನರಾಗಿದ್ದಾರೆ. ರಾಮನಗರ ತಾಲೂಕಿನ ಗುನ್ನೂರು ಬಳಿ ಇರುವ ತೋಟದಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ ನಡೆದಿದೆ. ಇದೇ ಜಾಗದಲ್ಲಿ ದಿಲೀಪ್ ರಾಜ್ ಅವರು ತೋಟ ನಿರ್ಮಾಣ ಮಾಡಿಕೊಂಡು ಮನೆ ಕಟ್ಟಿದ್ದರು. ಇಂದು (ಮೇ 13) ಸಂಜೆ 4 ಗಂಟೆ ಸುಮಾರಿಗೆ ಅಂತ್ಯಕ್ರಿಯೆ ನಡೆಯಲಿದೆ.
ಖ್ಯಾತ ನಟ ದಿಲೀಪ್ ರಾಜ್ (Dileep Raj) ಅವರು ನಿಧನರಾಗಿದ್ದು, ರಾಮನಗರ ತಾಲೂಕಿನ ಗುನ್ನೂರು ಬಳಿಯ ತೋಟದಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ. ಈ ಬಗ್ಗೆ ಕುಟುಂಬದವರು ಮಾಹಿತಿ ಹಂಚಿಕೊಂಡಿದ್ದಾರೆ. 10 ವರ್ಷಗಳ ಹಿಂದೆ ಗುನ್ನೂರು ಗ್ರಾಮದಲ್ಲಿ ದಿಲೀಪ್ ರಾಜ್ ಅವರು ಒಂದು ಎಕರೆ ಜಮೀನು ಖರೀದಿಸಿದ್ದರು. ಇಂದು (ಮೇ 13) ಸಂಜೆ ನಾಲ್ಕು ಗಂಟೆ ಸುಮಾರಿಗೆ ಅದೇ ಸ್ಥಳದಲ್ಲಿ ಅಂತ್ಯಕ್ರಿಯೆ (Dileep Raj Funeral) ಮಾಡಲು ಕುಟುಂಬದವರು ನಿರ್ಧರಿಸಿದ್ದಾರೆ. ಫಾರ್ಮ್ ಹೌಸ್ ಕೆಲಸಗಾರರು ಹಾಗೂ ಗ್ರಾಮಸ್ಥರಿಂದ ಗುಂಡಿ ತೋಡುವ ಕಾರ್ಯ ಸೇರಿದಂತೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಇದೇ ಜಾಗದಲ್ಲಿ ದಿಲೀಪ್ ರಾಜ್ ಅವರು ತೋಟ ನಿರ್ಮಾಣ ಮಾಡಿಕೊಂಡು ಮನೆ ಕಟ್ಟಿದ್ದರು. ಅವರ ಅಕಾಲಿಕ ಮರಣದಿಂದಾಗಿ ಕುಟುಂಬದವರಿಗೆ ಮತ್ತು ಆಪ್ತರಿಗೆ ತೀವ್ರ ಆಘಾತ ಆಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

