‘ಕೆರೆಬೇಟೆ ಕಥೆ ಬಿಟ್ಟುಕೊಡಬಾರದು ಅಂತ ಹೆಚ್ಚು ಹಣ ಕೊಟ್ಟಿದ್ದಾರೆ’: ಗೋಪಾಲಕೃಷ್ಣ ದೇಶಪಾಂಡೆ

Updated on: Mar 10, 2024 | 6:26 PM

ಟ್ರೇಲರ್​ ನೋಡಿದ ಬಳಿಕ ‘ಕೆರೆಬೇಟೆ’ ಸಿನಿಮಾದ ಕಥೆ ಏನು ಎಂಬ ಬಗ್ಗೆ ಕೌತುಕ ಹೆಚ್ಚಾಗಿದೆ. ಈ ಸಿನಿಮಾದಲ್ಲಿ ಗೋಪಾಲಕೃಷ್ಣ ದೇಶಪಾಂಡೆ ಅವರು ಒಂದು ಮುಖ್ಯ ಪಾತ್ರ ಮಾಡಿದ್ದಾರೆ. ಹೊಸ ಸಾಂಗ್​ ರಿಲೀಸ್​ ವೇಳೆ ಅವರು ಸಿನಿಮಾ ಕುರಿತು ಕೆಲವು ಮಾಹಿತಿ ಹಂಚಿಕೊಂಡಿದ್ದಾರೆ. ಮಾರ್ಚ್​ 15ರಂದು ತೆರೆಕಾಣಲಿರುವ ಈ ಚಿತ್ರದಲ್ಲಿ ಮಲೆನಾಡಿನ ಕಥೆ ಇದೆ.

ಮಾರ್ಚ್​ 15ರಂದು ‘ಕೆರೆಬೇಟೆ’ ಸಿನಿಮಾ (Kerebete Movie) ಬಿಡುಗಡೆ ಆಗಲಿದೆ. ಈ ಸಿನಿಮಾದಲ್ಲಿ ಗೌರಿಶಂಕರ್​ ಅವರು ಹೀರೋ ಆಗಿ ನಟಿಸಿದ್ದಾರೆ. ಈ ಚಿತ್ರದಲ್ಲಿ ಜನಪ್ರಿಯ ಪೋಷಕ ನಟ ಗೋಪಾಲಕೃಷ್ಣ ದೇಶಪಾಂಡೆ ಕೂಡ ಅಭಿಯಿಸಿದ್ದಾರೆ. ಇತ್ತೀಚೆಗೆ ಈ ಸಿನಿಮಾದ ಹೊಸ ಹಾಡು ಬಿಡುಗಡೆ ಆಯಿತು. ಈ ವೇಳೆ ಮಾತನಾಡಿದ ಗೋಪಾಲಕೃಷ್ಣ ದೇಶಪಾಂಡೆ (Gopal Deshpande) ಅವರು ತಮ್ಮ ಪಾತ್ರದ ಬಗ್ಗೆ ಕಿರುಪರಿಚಯ ನೀಡಿದರು. ಆದರೆ ಕಥೆ ಬಗ್ಗೆ ಅವರು ಏನನ್ನೂ ಬಿಟ್ಟುಕೊಡಲಿಲ್ಲ. ‘ಈ ಸಿನಿಮಾದ ಕಥೆ ಬಿಟ್ಟುಕೊಡಬಾರದು ಅಂತ ನನಗೆ ಹೆಚ್ಚುವರಿ ಹಣ ನೀಡಿದ್ದಾರೆ’ ಎಂದು ಅವರು ನಕ್ಕರು. ‘ಕರೆಬೇಟೆ’ ಸಿನಿಮಾದ ಶೂಟಿಂಗ್​ ಸಾಗರ, ಸೊರಬ, ತೀರ್ಥಹಳ್ಳಿ ಮುಂತಾದ ಕಡೆಗಳಲ್ಲಿ ಮಾಡಲಾಗಿದೆ. ಈ ಚಿತ್ರದಲ್ಲಿ ಕಥಾನಾಯಕಿಯ ತಂದೆಯ ಪಾತ್ರದಲ್ಲಿ ಗೋಪಾಲಕೃಷ್ಣ ದೇಶಪಾಂಡೆ ಅವರು ನಟಿಸಿದ್ದಾರೆ. ರಾಜ್​ಗುರು ಅವರು ನಿರ್ದೇಶನ ಮಾಡಿದ್ದು, ಗಗನ್​ ಬಡೇರಿಯಾ ಸಂಗೀತ ನೀಡಿದ್ದಾರೆ. ‘ಜನಮನ ಸಿನಿಮಾಸ್​’ ಬ್ಯಾನರ್​ ಮೂಲಕ ಈ ಚಿತ್ರ ನಿರ್ಮಾಣ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More