ಸರ್ಕಾರದ ನಿರ್ಧಾರ ಸರಿಯಾಗಿಯೇ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಪಾಕಿಸ್ತಾನದ ಉಗ್ರರ ವಿರುದ್ಧ ಭಾರತದ ಸೇನೆ ಗುಡುಗಿದೆ. ಪಹಲ್ಗಾಮ್ನಲ್ಲಿ ದಾಳಿ ಮಾಡಿದ ಉಗ್ರರ ಹುಟ್ಟಡಗಿಸಲು ‘ಆಪರೇಷನ್ ಸಿಂಧೂರ್’ ಹೆಸರಿನಲ್ಲಿ ಪ್ರತಿದಾಳಿ ಮಾಡಲಾಗಿದೆ. ಈ ಬಗ್ಗೆ ಅನೇಕ ಸೆಲೆಬ್ರಿಟಿಗಳು ಪ್ರತಿಕ್ರಿಯೆ ನೀಡಿದ್ದಾರೆ. ‘ಹ್ಯಾಟ್ರಿಕ್ ಹೀರೋ’ ಶಿವರಾಜ್ಕುಮಾರ್ ಕೂಡ ಮಾತನಾಡಿದ್ದಾರೆ. ಶಿವಣ್ಣ ಮಾತನಾಡಿದ ವಿಡಿಯೋ ಇಲ್ಲಿದೆ..
ಪಾಕಿಸ್ತಾನದ ಉಗ್ರರ ವಿರುದ್ಧ ಭಾರತದ ಸೇನೆ ಗುಡುಗಿದೆ. ಪಹಲ್ಗಾಮ್ನಲ್ಲಿ (Pahalgam) ದಾಳಿ ಮಾಡಿದ ಉಗ್ರರ ಹುಟ್ಟಡಗಿಸಲು ‘ಆಪರೇಷನ್ ಸಿಂಧೂರ್’ (Operation Sindoor) ಹೆಸರಿನಲ್ಲಿ ಪ್ರತಿದಾಳಿ ಮಾಡಲಾಗಿದೆ. ಈ ಬಗ್ಗೆ ಅನೇಕ ಸೆಲೆಬ್ರಿಟಿಗಳು ಪ್ರತಿಕ್ರಿಯೆ ನೀಡಿದ್ದಾರೆ. ‘ಹ್ಯಾಟ್ರಿಕ್ ಹೀರೋ’ ಶಿವರಾಜ್ಕುಮಾರ್ (Shivarajkumar) ಕೂಡ ಮಾತನಾಡಿದ್ದಾರೆ. ‘ನನಗೆ ಹುಷಾರಿರಲಿಲ್ಲ. ಹಾಗಾಗಿ ಈ ಘಟನೆ ಬಗ್ಗೆ ಹೆಚ್ಚು ಗೊತ್ತಿರಲಿಲ್ಲ. ಈಗ ಕೇಳಿದೆ. ಸರ್ಕಾರ ಏನೇ ನಿರ್ಧಾರ ತೆಗೆದುಕೊಂಡರೂ ಸರಿಯಾಗಿ ಇರುತ್ತದೆ. ಅದು ತಿಳಿಯದೇ ಇಂಥ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ಪಹಲ್ಗಾಮ್ನಲ್ಲಿ ನಡೆದ ದಾಳಿ ತುಂಬ ನೋವಿನ ಘಟನೆ’ ಎಂದು ಶಿವಣ್ಣ ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us
