ಮಲ್ಟಿಪ್ಲೆಕ್ಸ್​ಗಳಲ್ಲಿ ಎಲ್ಲ ಭಾಷೆಯ ಚಿತ್ರಗಳಿಗೆ ₹200 ಟಿಕೆಟ್ ದರ ನಿಗದಿ, ಸರ್ಕಾರದ ಕ್ರಮ ಸ್ವಾಗತಿಸಿದ ಫಿಲ್ಮ್ ಚೇಂಬರ್

ಅರುಣ್​ ಕುಮಾರ್​ ಬೆಳ್ಳಿ

Updated on: Mar 08, 2025 | 7:40 PM

ಒಂಭತ್ತು ವಿಷಯಗಳ ಹಿಂದೆ ನಡೆದ ಸಭೆಯಲ್ಲಿ ಬೇರೆ ಭಾಷೆ ಚಿತ್ರಗಳ ಬಗ್ಗೆ ಯಾರೋ ಬ್ಯಾಟ್ ಬೀಸಿದಾಗ ಸಿದ್ದರಾಮಯ್ಯ ಕನ್ನಡ ಚಿತ್ರಗಳ ಬಗ್ಗೆ ಮಾತ್ರ ಮಾತಾಡಲು ಸಭೆಗೆ ಬಂದಿದ್ದೇನೆ ಎಂದು ಹೇಳಿದ್ದರಂತೆ. ಮೈಸೂರಲ್ಲಿ ಫಿಲ್ಮ್​ಸಿಟಿ ಆಗಬೇಕೆಂದು ಡಾ ರಾಜ್​ಕುಮಾರ್ ತುಂಬಾ ಆಸೆ ಇಟ್ಟುಕೊಂಡಿದ್ದಂತೆ, ಫಿಲ್ಮ್​ಸಿಟಿಯನ್ನು ಅಲ್ಲಿ ಸ್ಥಾಪಿಸಲು ಚಿತ್ರರಂಗದವರಿಗಿಂತ ಮುಖ್ಯಮಂತ್ರಿ ಹೆಚ್ಚು ಉತ್ಸುಕರಾಗಿದ್ದಾರೆ ಎಂದು ಗೋವಿಂದು ಹೇಳಿದರು.

ಬೆಂಗಳೂರು, ಮಾರ್ಚ್ 8: ಕನ್ನಡ ಚಿತ್ರೋದ್ಯಮ ಖುಷಿಯಿಂದ ಬೀಗುತ್ತಿದೆ. ಮಲ್ಟಿಪ್ಲೆಕ್ಸ್ ಗಳಲ್ಲಿ (Multiplexes) ಏಕರೂಪ ಟಿಕೆಟ್ ದರದ ಬಗ್ಗೆ ಸಿಎಂ ಸಿದ್ದರಾಮಯ್ಯ ನಿನ್ನೆ ಬಜೆಟ್ ನಲ್ಲಿ ಘೋಷಣೆ ಮಾಡಿರುವುದನ್ನು ಫಿಲ್ಮ್ ಚೇಂಬರ್ ಸಂತಸದಿಂದ ಸ್ವಾಗತಿಸಿದೆ. ಇದೇ ಹಿನ್ನೆಲೆಯಲ್ಲಿ ಚೇಂಬರ್ ಆಯೋಜಿಸಿದ ಸುದ್ದಿಗೋಷ್ಠಿಯಲ್ಲಿ ಮಾತಾಡಿದ ಮಾಜಿ ಅಧ್ಯಕ್ಷ ಸಾ ರಾ ಗೋವಿಂದು, ಮಲ್ಟಿಪ್ಲೆಕ್ಸ್ ಗಳಲ್ಲಿ ಎಲ್ಲ ಭಾಷೆಯ ಸಿನಿಮಾಗಳಿಗೆ ರೂ 200 ಟಿಕೆಟ್ ದರವನ್ನು ನಿಗದಿಪಡಿಸುವುದು 2016ರಲ್ಲೇ ಚರ್ಚೆಯಾಗಿತ್ತು ಮತ್ತು ಆಗಲೂ ಸಿದ್ದರಾಮಯ್ಯನವರೇ ರಾಜ್ಯದ ಮುಖ್ಯಮಂತ್ರಿಯಾಗಿದ್ದರು ಎಂದು ಹೇಳಿ, ಆದೇಶ ನೆನೆಗುದಿಗೆ ಯಾಕೆ ಬಿತ್ತು ಅನ್ನೋದನ್ನು ವಿವರಿಸಿದರು.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ‘ನಟ್ಟು ಬೋಲ್ಟ್ ಟೈಟ್ ಮಾಡ್ತೀನಿ ಎಂಬ ಮಾತು ಸರಿಯಲ್ಲ’; ಡಿಕೆಶಿ ಹೇಳಿಕೆಗೆ ಸಾರಾ ಗೋವಿಂದು ಉತ್ತರ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.