ಮತ್ತೊಮ್ಮೆ ಎನ್ ಡಿಎ ಸರ್ಕಾರ ರಚಿಸಲು ಸದಸ್ಯ ಪಕ್ಷಗಳೊಂದಿಗೆ ಸಭೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ

|

Updated on: Jun 05, 2024 | 7:10 PM

ಯಾಕೆಂದರೆ ಸರ್ಕಾರ ರಚಿಸುವ ದೂರದ ಅಸೆ ಇಟ್ಟುಕೊಂಡಿದ್ದ ಇಂಡಿಯ ಮೈತ್ರಿಕೂಟ ಅವರಿಬ್ಬರನ್ನು ಸಂಪರ್ಕಿಸುವ ಪ್ರಯತ್ನ ಮಾಡಿತ್ತು. ಆದರೆ ಅವರು ಎನ್ ಡಿಎಗೆ ತಮ್ಮ ನಿಷ್ಠೆ ಅಚಲ ಎಂದು ಸ್ಪಷ್ಟಪಡಿಸಿದರು. ಇಂದು ನಡೆದ ಸಭೆಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ ಸಿಂಗ್, ಏಕನಾಥ್ ಶಿಂಧೆ, ಹೆಚ್ ಡಿ ಕುಮಾರಸ್ವಾಮಿ, ಪ್ರಫುಲ್ ಪಟೇಲ್, ಪವನ್ ಕಲ್ಯಾಣ ಮೊದಲಾದವರು ಪಾಲ್ಗೊಂಡಿದ್ದರು.

ದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು (PN Narendra Modi) ಮೂರನೇ ಬಾರಿ ಆ ಹುದ್ದೆಯನ್ನು ಅಲಂಕರಿಸಲು ವೇದಿಕೆ ಆಲ್ಮೋಸ್ಟ್ ಸಿದ್ಧವಾಗಿದೆ. ಬಿಜೆಪಿ ನೇತೃತ್ವದ ಎನ್ ಡಿಎ ಒಕ್ಕೂಟ (NDA) ಸರ್ಕಾರ ರಚಿಸುವ ಪ್ರಸ್ತಾಪವನ್ನು ರಾಷ್ಟ್ರಪತಿಯವರಿಗೆ ಸಲ್ಲಿಸಲು ಅಣಿಯಾಗಿದ್ದು ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಇಂದು ದೆಹಲಿಯಲ್ಲಿ ನಡೆದ ಮೈತ್ರಿಕೂಟ ಸದಸ್ಯ (NDA member parties) ಪಕ್ಷಗಳ ಮುಖಂಡರು ಭಾಗವಹಿಸಿದ್ದರು. ಈ ಚುನಾವಣೆಯಲ್ಲಿ ಜೆಡಿಯುನ ನೀತಿಶ್ ಕುಮಾರ್ ಮತ್ತು ತೆಲುಗು ದೇಶಂ ಪಕ್ಷದ ಚಂದ್ರಬಾಬು ನಾಯ್ಡು ಅವರನ್ನು ಕಿಂಗ್ ಮೇಕರ್ ಗಳೆಂದು ಪರಿಗಣಿಸಲಾಗುತ್ತಿದೆ. ಯಾಕೆಂದರೆ ಸರ್ಕಾರ ರಚಿಸುವ ದೂರದ ಅಸೆ ಇಟ್ಟುಕೊಂಡಿದ್ದ ಇಂಡಿಯ ಮೈತ್ರಿಕೂಟ ಅವರಿಬ್ಬರನ್ನು ಸಂಪರ್ಕಿಸುವ ಪ್ರಯತ್ನ ಮಾಡಿತ್ತು. ಆದರೆ ಅವರು ಎನ್ ಡಿಎಗೆ ತಮ್ಮ ನಿಷ್ಠೆ ಅಚಲ ಎಂದು ಸ್ಪಷ್ಟಪಡಿಸಿದರು. ಇಂದು ನಡೆದ ಸಭೆಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ ಸಿಂಗ್, ಏಕನಾಥ್ ಶಿಂಧೆ, ಹೆಚ್ ಡಿ ಕುಮಾರಸ್ವಾಮಿ, ಪ್ರಫುಲ್ ಪಟೇಲ್, ಪವನ್ ಕಲ್ಯಾಣ ಮೊದಲಾದವರು ಪಾಲ್ಗೊಂಡಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   Lok Sabha Election Results 2024: ಚುನಾವಣಾ ಗೆಲುವಿಗೆ ಪ್ರಧಾನಿ ಮೋದಿಯನ್ನು ಅಭಿನಂದಿಸಿದ ವಿಶ್ವ ನಾಯಕರು

Follow us on